ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪದಿಂದ 16,952 ಹೆಕ್ಟೇರ್ ನಷ್ಟು ಬೆಳೆ ನಾಶವಾಗಿದೆ. ಮಳೆಯನ್ನೇ ನೆಚ್ಚಿಕೊಂಡು ರೈತರು ಸಾವಿರಾರು ರೂಪಾಯಿ ವ್ಯಯ ಮಾಡಿ ಬೆಳೆದಿದ್ದ ಬೆಳೆ ಬಾಡಿಹೋಗಿದೆ. ಆಗೊಮ್ಮೆ ಈಗೊಮ್ಮೆ ಬಿದ್ದಿದ್ದ ಮಳೆಗೆ ರಾಗಿ, ಜೊಳ ಸೇರಿದಂತೆ ಇತರೆ ಬೆಳೆಗಳಿಗೆ ಕಳೆ ಬಂದಿತ್ತು, ಆದರೆ ಕಳೆದ ಎರಡ್ಮೂರು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ಅದೂ ಸಹ ನೆಲಕಚ್ಚಿ ರೈತರನ್ನ ಸಂಕಷ್ಟದ ದವಡೆಗೆ ನೂಕಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಜೊತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಬರ ಘೋಷಣೆ ಮಾಡಿ ಬರ ಪರಿಹಾರವೆಂದು ಇಡೀ ರಾಜ್ಯಕ್ಕೆ 342 ಕೋಟಿ ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇವಲ 1ಕೋಟಿ ಮಾತ್ರ ಬಿಡುಗಡೆ ಆಗಿದೆ. ಈ ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ, 15-20ಕೋಟಿ ಬೇಕಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದಿದೆ. ಈ ತಾಲೂಕಿನಲ್ಲಿ ಸಾಸಲು ಹೋಬಳಿ ಎಲ್ಲಾ ರೀತಿಯಲ್ಲಿ ತೀರಾ ಹಿಂದುಳಿದಿದೆ, ಆದ್ದರಿಂದ ಮೊದಲ ಆದ್ಯತೆ ಈ ಭಾಗದ ರೈತರಿಗೆ ನೀಡಬೇಕಾಗಿದೆ ಎಂದು ತಿಳಿಸಿದರು.
ನಮ್ಮ ತಾಲೂಕಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಬಳಿ ಅನುದಾನ ಬೇಕೆಂದು ನಿರಂತರವಾಗಿ ಬೇಡಿಕೆ ಇಡಲಾಗುತ್ತಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(SHDP)ಗೆ 16ಕೋಟಿ 75ಲಕ್ಷ ಕೇಳಿದ್ದೆ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 20ಕೋಟಿ ಕೇಳಿದ್ದೆ. ನಾವು ಬೇಡಿಕೆ ಇಟ್ಟಷ್ಟು ರಾಜ್ಯ ಸರ್ಕಾರ ನೀಡಲಾಗುತ್ತಿದಿಯೇ?, ಆದ್ದರಿಂದ ತಾವು ಮೊದಲು ಬೇಡಿಕೆ ಇಟ್ಟ ಅನುದಾನಕ್ಕೆ ಸ್ಪಂದಿಸುವ ಕೆಲಸ ಮಾಡಿ ತದನಂತರ ಕೇಂದ್ರದ ಮೊರೆ ಹೋಗಬೇಕು, ಅದನ್ನ ಬಿಟ್ಟು ಕೇವಲ ಕೇಂದ್ರದ ಕಡೆಗೆ ಬೊಟ್ಟು ಮಾಡಿ ತೋರಿಸಿದರೆ ಏನೂ ಪ್ರಯೋಜನವಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದರು.
ಮೋದಿ ಅವರು ಪ್ರಧಾನಿ ಆದ ನಂತರ ಕಿಸಾನ್ ಸಮ್ಮಾನ್, ಫಸಲ್ ಭಿಮಾ ಯೋಜನೆ ಸೇರಿದಂತೆ ಹತ್ತು ಹಲವಾರು ಜನ ಹಾಗೂ ರೈತ ಸ್ನೇಹಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದ್ದರಿಂದ ನನಗೆ ಮೋದಿ ಸರ್ಕಾರದ ಬಗ್ಗೆ ಗೊತ್ತು ಅಷ್ಟೇ ಯುಪಿಎ ಸರ್ಕಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.
Mastercard is just one of one of the most widely approved and relied on payment…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
When it involves on-line gambling enterpris padişahbet günceles, among one of the most tempting deals…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…