ತಾಲೂಕಿನಲ್ಲಿ 16,952 ಹೆಕ್ಟೇರ್ ನಷ್ಟು‌ ಬೆಳೆ ನಾಶ- ಶೀಘ್ರವಾಗಿ ‌ಬರ ಪರಿಹಾರ ಅಗತ್ಯ ಇದೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪದಿಂದ 16,952 ಹೆಕ್ಟೇರ್ ನಷ್ಟು‌ ಬೆಳೆ ನಾಶವಾಗಿದೆ. ಮಳೆಯನ್ನೇ ನೆಚ್ಚಿಕೊಂಡು ರೈತರು‌ ಸಾವಿರಾರು ರೂಪಾಯಿ ವ್ಯಯ ಮಾಡಿ ಬೆಳೆದಿದ್ದ ಬೆಳೆ ಬಾಡಿಹೋಗಿದೆ. ಆಗೊಮ್ಮೆ ಈಗೊಮ್ಮೆ ಬಿದ್ದಿದ್ದ ಮಳೆಗೆ ರಾಗಿ, ಜೊಳ ಸೇರಿದಂತೆ ಇತರೆ ಬೆಳೆಗಳಿಗೆ ಕಳೆ ಬಂದಿತ್ತು, ಆದರೆ ಕಳೆದ ಎರಡ್ಮೂರು ದಿನಗಳಿಂದ ಬಿಟ್ಟೂ ಬಿಡದೆ‌ ಸುರಿಯುತ್ತಿರುವ ಮಳೆಗೆ ಅದೂ ಸಹ‌‌ ನೆಲಕಚ್ಚಿ ರೈತರನ್ನ ಸಂಕಷ್ಟದ ದವಡೆಗೆ ನೂಕಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಜೊತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಬರ ಘೋಷಣೆ ಮಾಡಿ ಬರ ಪರಿಹಾರವೆಂದು ಇಡೀ ರಾಜ್ಯಕ್ಕೆ 342 ಕೋಟಿ ರೂ.‌ ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ‌ ಕೇವಲ 1ಕೋಟಿ ಮಾತ್ರ ಬಿಡುಗಡೆ ಆಗಿದೆ. ಈ ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ, 15-20ಕೋಟಿ ಬೇಕಾಗಿದೆ ಎಂದರು.

ಬರ ಘೋಷಣೆ ಮಾಡುವುದಕ್ಕಿಂತ ಮೊದಲು ದೊಡ್ಡಬಳ್ಳಾಪುರ ತಾಲೂಕಿಗೆ ಕೇವಲ 25 ಲಕ್ಷವನ್ನ ಕುಡಿಯುವ ನೀರಿಗಾಗಿ ಬಿಡುಗಡೆ ಮಾಡಲಾಗಿತ್ತು. ಈಗ ಕುಡಿಯುವ ನೀರಿನ ಜೊತೆಗೆ ದನಕರುಗಳಿಗೆ ಮೇವನ್ನ‌ ಒದಗಿಸಲು ಮೇವಿನ‌ ಬ್ಯಾಂಕ್ ಸ್ಥಾಪನೆ ಮಾಡಬೇಕು, ತುರ್ತು ಪರಿಹಾರ ನಿಧಿಯನ್ನು ಸ್ಥಾಪನೆ ಮಾಡಬೇಕು. ಬೆಳೆ ನಾಶಕ್ಕೆ ಹೆಚ್ಚಿನ‌ ಪರಿಹಾರ ತಾಲೂಕಿಗೆ ಅವಶ್ಯಕತೆ ಇದೆ. ಆದ್ದರಿಂದ ಆದಷ್ಟು ಬೇಗ ರೈತರಿಗೆ ಅನುಕೂಲವಾಗುವಂತೆ ಪರಿಹಾರ ನೀಡುವಂತೆ‌ ರಾಜ್ಯ ಸರ್ಕಾರಕ್ಕೆ ಮನವಿ‌ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದಿದೆ. ಈ ತಾಲೂಕಿನಲ್ಲಿ ಸಾಸಲು ಹೋಬಳಿ‌ ಎಲ್ಲಾ ರೀತಿಯಲ್ಲಿ ತೀರಾ ಹಿಂದುಳಿದಿದೆ, ಆದ್ದರಿಂದ ಮೊದಲ ಆದ್ಯತೆ ಈ ಭಾಗದ ರೈತರಿಗೆ ನೀಡಬೇಕಾಗಿದೆ ಎಂದು‌ ತಿಳಿಸಿದರು.

ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಮೊದಲು 10 ಸಾವಿರ ಕೋಟಿ ಬಿಡುಗಡೆ ಮಾಡಲಿ ತದನಂತರ ಕೇಂದ್ರ ಸರ್ಕಾರದ ಬಳಿ 10 ಸಾವಿರ ಕೋಟಿ ಬಿಡುಗಡೆ ಮಾಡಿಸಿಕೊಳ್ಳುವ ಕೆಲಸ ನಾವೆಲ್ಲರೂ ಸೇರಿ ಮಾಡೋಣ. ಪ್ರಸ್ತುತ ಈ ಬರ ಪರಿಸ್ಥಿತಿ ಅವಲೋಕಿಸಿ ಸಂಪೂರ್ಣ ಅಂಕಿಅಂಶಗಳ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೂ ಕಳುಹಿಸಿಕೊಡಲಾಗುವುದು ಎಂದರು.

ನಮ್ಮ ತಾಲೂಕಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ‌ ಬಳಿ ಅನುದಾನ ಬೇಕೆಂದು ನಿರಂತರವಾಗಿ ಬೇಡಿಕೆ‌ ಇಡಲಾಗುತ್ತಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(SHDP)ಗೆ 16ಕೋಟಿ 75ಲಕ್ಷ ಕೇಳಿದ್ದೆ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 20ಕೋಟಿ ಕೇಳಿದ್ದೆ. ನಾವು ಬೇಡಿಕೆ‌ ಇಟ್ಟಷ್ಟು ರಾಜ್ಯ ಸರ್ಕಾರ ನೀಡಲಾಗುತ್ತಿದಿಯೇ?, ಆದ್ದರಿಂದ ತಾವು ಮೊದಲು‌ ಬೇಡಿಕೆ‌ ಇಟ್ಟ ಅನುದಾನಕ್ಕೆ ಸ್ಪಂದಿಸುವ ಕೆಲಸ‌ ಮಾಡಿ ತದನಂತರ ಕೇಂದ್ರದ ಮೊರೆ ಹೋಗಬೇಕು, ಅದ‌ನ್ನ ಬಿಟ್ಟು ಕೇವಲ ಕೇಂದ್ರದ ಕಡೆಗೆ ಬೊಟ್ಟು ಮಾಡಿ‌ ತೋರಿಸಿದರೆ ಏನೂ‌ ಪ್ರಯೋಜನವಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದರು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಹತ್ತು ವರ್ಷಗಳ‌ ಕಾಲ ಆಡಳಿತ ನಡೆಸಿತು, ಆ ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಜನ ಸಾಮಾನ್ಯರಿಗೆ ಉಪಯೋಗವಾಗುವಂತಹ ಒಂದೇ ಒಂದು ಯೋಜನೆ ಜಾರಿ ಮಾಡಿರುವ ಉದಾಹರಣೆ ಇಲ್ಲ ಎಂದು ದೂರಿದ್ದಲ್ಲದೇ, ಯುಪಿಎ ಸರ್ಕಾರದ ಬಗ್ಗೆ, ಅದು ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಕಾಂಗ್ರೆಸ್ ನವರಿಗೇ ಯಾರಿಗೂ ಗೊತ್ತಿಲ್ಲ, ಇನ್ನೂ ಜನಗಳಿಗೆ ಎಲ್ಲಿ ನೆನಪಿರುತ್ತದೆ ಎಂದು ವ್ಯಂಗ್ಯವಾಡಿದರು.

ಮೋದಿ ಅವರು ಪ್ರಧಾನಿ ಆದ ನಂತರ ಕಿಸಾನ್ ಸಮ್ಮಾನ್, ಫಸಲ್ ಭಿಮಾ ಯೋಜನೆ ಸೇರಿದಂತೆ ಹತ್ತು ಹಲವಾರು ಜನ ಹಾಗೂ ರೈತ ಸ್ನೇಹಿ ಯೋಜನೆಗಳನ್ನು‌ ಜಾರಿ ಮಾಡಿದ್ದಾರೆ. ಆದ್ದರಿಂದ ನನಗೆ ಮೋದಿ ಸರ್ಕಾರದ ಬಗ್ಗೆ ಗೊತ್ತು ಅಷ್ಟೇ ಯುಪಿಎ ಸರ್ಕಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಗೆ ಪೂರ್ಣಬಹುಮತ ಕೊಟ್ಟು ಗೆಲ್ಲಿಸಿ ಅಧಿಕಾರದಲ್ಲಿರಿಸಿದ್ದಾರೆ. ಆದ್ದರಿಂದ ಜನರ ಮನಸ್ಸು ಗೆದ್ದು ಜನ ಪರ ಆಡಳಿತ ನಡೆಸಿ, ಕೇಂದ್ರ ಸರ್ಕಾರದ ಬಗ್ಗೆ ಟೀಕೆ ಟಿಪ್ಪಣಿ ಮಾಡುವುದನ್ನ ನಿಲ್ಲಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಿವಿಮಾತನ್ನ ಹೇಳಿದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

5 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago