ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪದಿಂದ 16,952 ಹೆಕ್ಟೇರ್ ನಷ್ಟು ಬೆಳೆ ನಾಶವಾಗಿದೆ. ಮಳೆಯನ್ನೇ ನೆಚ್ಚಿಕೊಂಡು ರೈತರು ಸಾವಿರಾರು ರೂಪಾಯಿ ವ್ಯಯ ಮಾಡಿ ಬೆಳೆದಿದ್ದ ಬೆಳೆ ಬಾಡಿಹೋಗಿದೆ. ಆಗೊಮ್ಮೆ ಈಗೊಮ್ಮೆ ಬಿದ್ದಿದ್ದ ಮಳೆಗೆ ರಾಗಿ, ಜೊಳ ಸೇರಿದಂತೆ ಇತರೆ ಬೆಳೆಗಳಿಗೆ ಕಳೆ ಬಂದಿತ್ತು, ಆದರೆ ಕಳೆದ ಎರಡ್ಮೂರು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ಅದೂ ಸಹ ನೆಲಕಚ್ಚಿ ರೈತರನ್ನ ಸಂಕಷ್ಟದ ದವಡೆಗೆ ನೂಕಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಜೊತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಬರ ಘೋಷಣೆ ಮಾಡಿ ಬರ ಪರಿಹಾರವೆಂದು ಇಡೀ ರಾಜ್ಯಕ್ಕೆ 342 ಕೋಟಿ ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇವಲ 1ಕೋಟಿ ಮಾತ್ರ ಬಿಡುಗಡೆ ಆಗಿದೆ. ಈ ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ, 15-20ಕೋಟಿ ಬೇಕಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದಿದೆ. ಈ ತಾಲೂಕಿನಲ್ಲಿ ಸಾಸಲು ಹೋಬಳಿ ಎಲ್ಲಾ ರೀತಿಯಲ್ಲಿ ತೀರಾ ಹಿಂದುಳಿದಿದೆ, ಆದ್ದರಿಂದ ಮೊದಲ ಆದ್ಯತೆ ಈ ಭಾಗದ ರೈತರಿಗೆ ನೀಡಬೇಕಾಗಿದೆ ಎಂದು ತಿಳಿಸಿದರು.
ನಮ್ಮ ತಾಲೂಕಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಬಳಿ ಅನುದಾನ ಬೇಕೆಂದು ನಿರಂತರವಾಗಿ ಬೇಡಿಕೆ ಇಡಲಾಗುತ್ತಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(SHDP)ಗೆ 16ಕೋಟಿ 75ಲಕ್ಷ ಕೇಳಿದ್ದೆ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 20ಕೋಟಿ ಕೇಳಿದ್ದೆ. ನಾವು ಬೇಡಿಕೆ ಇಟ್ಟಷ್ಟು ರಾಜ್ಯ ಸರ್ಕಾರ ನೀಡಲಾಗುತ್ತಿದಿಯೇ?, ಆದ್ದರಿಂದ ತಾವು ಮೊದಲು ಬೇಡಿಕೆ ಇಟ್ಟ ಅನುದಾನಕ್ಕೆ ಸ್ಪಂದಿಸುವ ಕೆಲಸ ಮಾಡಿ ತದನಂತರ ಕೇಂದ್ರದ ಮೊರೆ ಹೋಗಬೇಕು, ಅದನ್ನ ಬಿಟ್ಟು ಕೇವಲ ಕೇಂದ್ರದ ಕಡೆಗೆ ಬೊಟ್ಟು ಮಾಡಿ ತೋರಿಸಿದರೆ ಏನೂ ಪ್ರಯೋಜನವಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದರು.
ಮೋದಿ ಅವರು ಪ್ರಧಾನಿ ಆದ ನಂತರ ಕಿಸಾನ್ ಸಮ್ಮಾನ್, ಫಸಲ್ ಭಿಮಾ ಯೋಜನೆ ಸೇರಿದಂತೆ ಹತ್ತು ಹಲವಾರು ಜನ ಹಾಗೂ ರೈತ ಸ್ನೇಹಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದ್ದರಿಂದ ನನಗೆ ಮೋದಿ ಸರ್ಕಾರದ ಬಗ್ಗೆ ಗೊತ್ತು ಅಷ್ಟೇ ಯುಪಿಎ ಸರ್ಕಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…