ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪದಿಂದ 16,952 ಹೆಕ್ಟೇರ್ ನಷ್ಟು ಬೆಳೆ ನಾಶವಾಗಿದೆ. ಮಳೆಯನ್ನೇ ನೆಚ್ಚಿಕೊಂಡು ರೈತರು ಸಾವಿರಾರು ರೂಪಾಯಿ ವ್ಯಯ ಮಾಡಿ ಬೆಳೆದಿದ್ದ ಬೆಳೆ ಬಾಡಿಹೋಗಿದೆ. ಆಗೊಮ್ಮೆ ಈಗೊಮ್ಮೆ ಬಿದ್ದಿದ್ದ ಮಳೆಗೆ ರಾಗಿ, ಜೊಳ ಸೇರಿದಂತೆ ಇತರೆ ಬೆಳೆಗಳಿಗೆ ಕಳೆ ಬಂದಿತ್ತು, ಆದರೆ ಕಳೆದ ಎರಡ್ಮೂರು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ಅದೂ ಸಹ ನೆಲಕಚ್ಚಿ ರೈತರನ್ನ ಸಂಕಷ್ಟದ ದವಡೆಗೆ ನೂಕಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಜೊತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಬರ ಘೋಷಣೆ ಮಾಡಿ ಬರ ಪರಿಹಾರವೆಂದು ಇಡೀ ರಾಜ್ಯಕ್ಕೆ 342 ಕೋಟಿ ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇವಲ 1ಕೋಟಿ ಮಾತ್ರ ಬಿಡುಗಡೆ ಆಗಿದೆ. ಈ ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ, 15-20ಕೋಟಿ ಬೇಕಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದಿದೆ. ಈ ತಾಲೂಕಿನಲ್ಲಿ ಸಾಸಲು ಹೋಬಳಿ ಎಲ್ಲಾ ರೀತಿಯಲ್ಲಿ ತೀರಾ ಹಿಂದುಳಿದಿದೆ, ಆದ್ದರಿಂದ ಮೊದಲ ಆದ್ಯತೆ ಈ ಭಾಗದ ರೈತರಿಗೆ ನೀಡಬೇಕಾಗಿದೆ ಎಂದು ತಿಳಿಸಿದರು.
ನಮ್ಮ ತಾಲೂಕಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಬಳಿ ಅನುದಾನ ಬೇಕೆಂದು ನಿರಂತರವಾಗಿ ಬೇಡಿಕೆ ಇಡಲಾಗುತ್ತಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(SHDP)ಗೆ 16ಕೋಟಿ 75ಲಕ್ಷ ಕೇಳಿದ್ದೆ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 20ಕೋಟಿ ಕೇಳಿದ್ದೆ. ನಾವು ಬೇಡಿಕೆ ಇಟ್ಟಷ್ಟು ರಾಜ್ಯ ಸರ್ಕಾರ ನೀಡಲಾಗುತ್ತಿದಿಯೇ?, ಆದ್ದರಿಂದ ತಾವು ಮೊದಲು ಬೇಡಿಕೆ ಇಟ್ಟ ಅನುದಾನಕ್ಕೆ ಸ್ಪಂದಿಸುವ ಕೆಲಸ ಮಾಡಿ ತದನಂತರ ಕೇಂದ್ರದ ಮೊರೆ ಹೋಗಬೇಕು, ಅದನ್ನ ಬಿಟ್ಟು ಕೇವಲ ಕೇಂದ್ರದ ಕಡೆಗೆ ಬೊಟ್ಟು ಮಾಡಿ ತೋರಿಸಿದರೆ ಏನೂ ಪ್ರಯೋಜನವಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದರು.
ಮೋದಿ ಅವರು ಪ್ರಧಾನಿ ಆದ ನಂತರ ಕಿಸಾನ್ ಸಮ್ಮಾನ್, ಫಸಲ್ ಭಿಮಾ ಯೋಜನೆ ಸೇರಿದಂತೆ ಹತ್ತು ಹಲವಾರು ಜನ ಹಾಗೂ ರೈತ ಸ್ನೇಹಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದ್ದರಿಂದ ನನಗೆ ಮೋದಿ ಸರ್ಕಾರದ ಬಗ್ಗೆ ಗೊತ್ತು ಅಷ್ಟೇ ಯುಪಿಎ ಸರ್ಕಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…