ತಾಲೂಕಿನಿಂದ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ- ತರಬೇತುದಾರ ಸುನೀಲ್

ತಾಲ್ಲೂಕಿನ ಕ್ರೀಡಾಪಟುಗಳು ಅತ್ಯಂತ ಪ್ರತಿಭಾನ್ವಿತರಾಗಿದ್ದು, ರಾಜ್ಯ ಮತ್ತು ರಾಷ್ಟ್ರ ಕ್ರೀಡಾಕೂಟಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹೆಸರನ್ನು ಪ್ರತಿನಿಧಿಸುವ ಸಾಮರ್ಥ್ಯ ಇದೆ. ನಮ್ಮ ಕ್ರೀಡಾಪಟುಗಳು ಅಭ್ಯಾಸ ನಡೆಸಲು ನಮ್ಮಲ್ಲಿ ಸಿಂಥೆಟಿಕ್ ಟ್ರ್ಯಾಕ್‌ನ ಅವಶ್ಯಕತೆ ಇದೆ ಮಕ್ಕಳು ಅಭ್ಯಾಸ ನಡೆಸಲು ತುಮಕೂರು ಜಿಲ್ಲೆ ಅಥವಾ ಬೆಂಗಳೂರಿನ ಟ್ರ್ಯಾಕ್ ನ ಮೇಲೆ ಅವಲಂಬಿತರಾಗಿದ್ದಾರೆ. ಈ ಕುರಿತು ಸರ್ಕಾರ ಅಥವಾ ಸ್ಥಳೀಯ ಕ್ರೀಡಾ ಇಲಾಖೆಯು ಗಮನಹರಿಸಬೇಕಿದೆ ಎಂದು ತರಬೇತುದಾರ ಸುನೀಲ್ ಅಭಿಪ್ರಾಯಪಟ್ಟರು.

ಮುಂದಿನ ಕ್ರೀಡಾ ಕೂಟದ ಬಗ್ಗೆ ಮಾಹಿತಿ ನೀಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನ ಯುವ ಕ್ರೀಡಾಪಟುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಈ ಸಂಬಂಧ ನಗರದ  ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಕ್ರೀಡಾ ಕ್ಲಬ್ ನ ತರಬೇತಿದಾರ ಆನಂದ್ ಮಾತನಾಡಿ, ಮುಂದಿನ ಫೆಬ್ರವರಿ ತಿಂಗಳಿನಲ್ಲಿ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೊಡ್ಡಬಳ್ಳಾಪುರದ ಮಕ್ಕಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ.

ನಮ್ಮಲ್ಲಿ ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿದ್ದು ತರಬೇತಿಗೆ ಬೇಕಾಗುವ ಅಗತ್ಯ ಸೌಲಭ್ಯಗಳ ಕೊರತೆ ಸೂಕ್ತ ರೀತಿಯಲ್ಲಿ ತರಬೇತಿಗೆ ಅಗತ್ಯವಾದ ಸೌಲಭ್ಯಗಳು ಲಭ್ಯವಾದರೆ  ಈ ಮಕ್ಕಳು ರಾಷ್ಟ್ರಮಟ್ಟದಲ್ಲಿ ದೊಡ್ಡ ಮಟ್ಟದ ಕ್ರೀಡೆಗಳಲ್ಲಿ ಗೆದ್ದು ನಮ್ಮ ತಾಲ್ಲೂಕಿನ ಕೀರ್ತಿ ಹೆಚ್ಚಿಸುವುದರಲ್ಲಿ  ಸಂಶಯವಿಲ್ಲ ಎಂದರು.

ಮತ್ತೋರ್ವ ತರಬೇತುದಾರ ಆನಂದ್ ಮಾತನಾಡಿ, ಕಳೆದ ಬಾರಿಯೂ ನಮ್ಮ ತಾಲೂಕಿನ ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು, ಸ್ಪರ್ಧೆಯ ಅಂತಿಮ ಘಟ್ಟದ ಹಂತ ಫೈನಲ್ ವರೆಗೆ ತಲುಪಿದ್ದರು. ಈ ಬಾರಿ ಗೆಲುವು ಸಾಧಿಸಿ ನಮ್ಮ ತಾಲ್ಲೂಕಿಗೆ ಕೀರ್ತಿ ತರುವ ವಿಶ್ವಾಸ ಇದೆ ಎಂದರು.

ಮಕ್ಕಳೊಂದಿಗೆ ಪೋಷಕರ ಪಾತ್ರ ತುಂಬಾ ದೊಡ್ಡದು ಮಕ್ಕಳ ಕ್ರೀಡಾ ಭವಿಷ್ಯಕ್ಕೆ ಅವರ ಸಹಕಾರ ಶ್ಲಾಘನೀಯ ನಿರಂತರ ಅಭ್ಯಾಸ ಮತ್ತು ಮಕ್ಕಳ ಪರಿಶ್ರಮ ಈ ಭಾರಿ ಫಲಿಸಲಿದೆ ಎಂದರು.

ಯುವ ಕ್ರೀಡಾಪಟುಗಳು ಮಾತನಾಡಿ, ತರಬೇತಿಯನ್ನು ಅತ್ಯುತ್ತಮವಾಗಿ ಪಡೆದಿದ್ದೇವೆ ಈಗಾಗಲೇ ರಾಜ್ಯ ಮಟ್ಟದಲ್ಲಿ ಮೆಡಲ್ ಗಳಿಸಿದ್ದು ರಾಷ್ಟ್ರ ಮಟ್ಟದಲ್ಲಿ ನಮ್ಮ ತಾಲೂಕಿನ ಕೀರ್ತಿಪತಾಕೆಯನ್ನು ಹಾರಿಸಲು ನಿರ್ಧರಿಸಿದ್ದೇವೆ. ಈ ಬಾರಿ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 20ಕ್ಕೂ ಅಧಿಕ ಯುವ ಕ್ರೀಡಾಪಟುಗಳು  ಭಾಗವಹಿಸಲಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಪೋರ್ಟ್ಸ್ ಕ್ಲಬ್ ನ ತರಬೇತಿದಾರರು, ಪೋಷಕರು ಉಪಸ್ಥಿತರಿದ್ದರು

Ramesh Babu

Journalist

Recent Posts

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 minute ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

15 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

19 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

20 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

22 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

22 hours ago