ತಾಲೂಕಿನಿಂದ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ- ತರಬೇತುದಾರ ಸುನೀಲ್

ತಾಲ್ಲೂಕಿನ ಕ್ರೀಡಾಪಟುಗಳು ಅತ್ಯಂತ ಪ್ರತಿಭಾನ್ವಿತರಾಗಿದ್ದು, ರಾಜ್ಯ ಮತ್ತು ರಾಷ್ಟ್ರ ಕ್ರೀಡಾಕೂಟಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹೆಸರನ್ನು ಪ್ರತಿನಿಧಿಸುವ ಸಾಮರ್ಥ್ಯ ಇದೆ. ನಮ್ಮ ಕ್ರೀಡಾಪಟುಗಳು ಅಭ್ಯಾಸ ನಡೆಸಲು ನಮ್ಮಲ್ಲಿ ಸಿಂಥೆಟಿಕ್ ಟ್ರ್ಯಾಕ್‌ನ ಅವಶ್ಯಕತೆ ಇದೆ ಮಕ್ಕಳು ಅಭ್ಯಾಸ ನಡೆಸಲು ತುಮಕೂರು ಜಿಲ್ಲೆ ಅಥವಾ ಬೆಂಗಳೂರಿನ ಟ್ರ್ಯಾಕ್ ನ ಮೇಲೆ ಅವಲಂಬಿತರಾಗಿದ್ದಾರೆ. ಈ ಕುರಿತು ಸರ್ಕಾರ ಅಥವಾ ಸ್ಥಳೀಯ ಕ್ರೀಡಾ ಇಲಾಖೆಯು ಗಮನಹರಿಸಬೇಕಿದೆ ಎಂದು ತರಬೇತುದಾರ ಸುನೀಲ್ ಅಭಿಪ್ರಾಯಪಟ್ಟರು.

ಮುಂದಿನ ಕ್ರೀಡಾ ಕೂಟದ ಬಗ್ಗೆ ಮಾಹಿತಿ ನೀಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನ ಯುವ ಕ್ರೀಡಾಪಟುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಈ ಸಂಬಂಧ ನಗರದ  ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಕ್ರೀಡಾ ಕ್ಲಬ್ ನ ತರಬೇತಿದಾರ ಆನಂದ್ ಮಾತನಾಡಿ, ಮುಂದಿನ ಫೆಬ್ರವರಿ ತಿಂಗಳಿನಲ್ಲಿ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೊಡ್ಡಬಳ್ಳಾಪುರದ ಮಕ್ಕಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ.

ನಮ್ಮಲ್ಲಿ ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿದ್ದು ತರಬೇತಿಗೆ ಬೇಕಾಗುವ ಅಗತ್ಯ ಸೌಲಭ್ಯಗಳ ಕೊರತೆ ಸೂಕ್ತ ರೀತಿಯಲ್ಲಿ ತರಬೇತಿಗೆ ಅಗತ್ಯವಾದ ಸೌಲಭ್ಯಗಳು ಲಭ್ಯವಾದರೆ  ಈ ಮಕ್ಕಳು ರಾಷ್ಟ್ರಮಟ್ಟದಲ್ಲಿ ದೊಡ್ಡ ಮಟ್ಟದ ಕ್ರೀಡೆಗಳಲ್ಲಿ ಗೆದ್ದು ನಮ್ಮ ತಾಲ್ಲೂಕಿನ ಕೀರ್ತಿ ಹೆಚ್ಚಿಸುವುದರಲ್ಲಿ  ಸಂಶಯವಿಲ್ಲ ಎಂದರು.

ಮತ್ತೋರ್ವ ತರಬೇತುದಾರ ಆನಂದ್ ಮಾತನಾಡಿ, ಕಳೆದ ಬಾರಿಯೂ ನಮ್ಮ ತಾಲೂಕಿನ ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು, ಸ್ಪರ್ಧೆಯ ಅಂತಿಮ ಘಟ್ಟದ ಹಂತ ಫೈನಲ್ ವರೆಗೆ ತಲುಪಿದ್ದರು. ಈ ಬಾರಿ ಗೆಲುವು ಸಾಧಿಸಿ ನಮ್ಮ ತಾಲ್ಲೂಕಿಗೆ ಕೀರ್ತಿ ತರುವ ವಿಶ್ವಾಸ ಇದೆ ಎಂದರು.

ಮಕ್ಕಳೊಂದಿಗೆ ಪೋಷಕರ ಪಾತ್ರ ತುಂಬಾ ದೊಡ್ಡದು ಮಕ್ಕಳ ಕ್ರೀಡಾ ಭವಿಷ್ಯಕ್ಕೆ ಅವರ ಸಹಕಾರ ಶ್ಲಾಘನೀಯ ನಿರಂತರ ಅಭ್ಯಾಸ ಮತ್ತು ಮಕ್ಕಳ ಪರಿಶ್ರಮ ಈ ಭಾರಿ ಫಲಿಸಲಿದೆ ಎಂದರು.

ಯುವ ಕ್ರೀಡಾಪಟುಗಳು ಮಾತನಾಡಿ, ತರಬೇತಿಯನ್ನು ಅತ್ಯುತ್ತಮವಾಗಿ ಪಡೆದಿದ್ದೇವೆ ಈಗಾಗಲೇ ರಾಜ್ಯ ಮಟ್ಟದಲ್ಲಿ ಮೆಡಲ್ ಗಳಿಸಿದ್ದು ರಾಷ್ಟ್ರ ಮಟ್ಟದಲ್ಲಿ ನಮ್ಮ ತಾಲೂಕಿನ ಕೀರ್ತಿಪತಾಕೆಯನ್ನು ಹಾರಿಸಲು ನಿರ್ಧರಿಸಿದ್ದೇವೆ. ಈ ಬಾರಿ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 20ಕ್ಕೂ ಅಧಿಕ ಯುವ ಕ್ರೀಡಾಪಟುಗಳು  ಭಾಗವಹಿಸಲಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಪೋರ್ಟ್ಸ್ ಕ್ಲಬ್ ನ ತರಬೇತಿದಾರರು, ಪೋಷಕರು ಉಪಸ್ಥಿತರಿದ್ದರು

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

6 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

11 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

20 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago