ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ.
ಕುಂಟನಕುಂಟೆ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ತಡರಾತ್ರಿ 11 ಗಂಟೆ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿದೆ. ವಾಹನದ ಶಬ್ಧ ಹಾಗೂ ವಾಹನದ ಬೆಳಕು ಕಾಣಿಸಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.
ಅಂತರಹಳ್ಳಿ- ಕೋಳೂರು ಸಮೀಪ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಒಬ್ಬೊಬ್ಬರೇ ಹೊಲ, ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.
ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ.
ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು, ಬಚ್ಚಹಳ್ಳಿಯ ಹಳ್ಳದ ಬಳಿ ಜ.26 ರಂದೇ ಬೋನು ಇರಿಸಿದ್ದಾರೆ. ಆದರೆ ಖತರ್ನಾಕ್ ಚಿರತೆ ಈವರೆಗೂ ಬೋನಿಗೆ ಬಿದ್ದಿಲ್ಲ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…