ತಾಲೂಕಿನ ಅಂತರಹಳ್ಳಿ-ಕೋಳೂರು ಸಮೀಪ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು

ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಕೆಲ‌ ದಿನಗಳಿಂದಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ.

ಕುಂಟನಕುಂಟೆ‌ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ತಡರಾತ್ರಿ 11 ಗಂಟೆ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿದೆ. ವಾಹನದ ಶಬ್ಧ ಹಾಗೂ ವಾಹನದ ಬೆಳಕು ಕಾಣಿಸಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.

ಅಂತರಹಳ್ಳಿ- ಕೋಳೂರು ಸಮೀಪ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಒಬ್ಬೊಬ್ಬರೇ ಹೊಲ, ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.

ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ.

ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು, ಬಚ್ಚಹಳ್ಳಿಯ ಹಳ್ಳದ ಬಳಿ ಜ.26 ರಂದೇ ಬೋನು ಇರಿಸಿದ್ದಾರೆ. ಆದರೆ ಖತರ್ನಾಕ್ ಚಿರತೆ ಈವರೆಗೂ ಬೋನಿಗೆ ಬಿದ್ದಿಲ್ಲ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 hour ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

20 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago