ತಾಲೂಕಿನ ಅಭಿವೃದ್ಧಿ ಜೊತೆಗೆ ಕೆರೆಗಳ ಅಭಿವೃದ್ಧಿಗೂ ಶ್ರಮಿಸುತ್ತೇನೆ- ನೂತನ ಅಧ್ಯಕ್ಷ ವಿ.ಚುಂಚೆಗೌಡ

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಸ್ತಿತ್ವದಿಂದ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು, ಅತೀ ಮುಖ್ಯವಾಗಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು ಎಂದು‌ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ವಿ.ಚುಂಚೆಗೌಡ ತಿಳಿಸಿದರು.

ನಗರದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ನಮ್ಮ ರಾಜ್ಯದ ನಾಯಕರು ಹಾಗೂ ತಾಲೂಕಿನ ಮಾಜಿ ಶಾಸಕ ಟಿ.ವೆಂಕಟರಮಣಯ್ಯರವರ ಪ್ರಯತ್ನದಿಂದಾಗಿ ಯೋಜನಾ ಪ್ರಾಧಿಕಾರ ಅಧ್ಯಕ್ಷನಾಗಿದ್ದೇನೆ. ನಮ್ಮ ನಗರಕ್ಕೆ ಯೋಜನಾ ಪ್ರಾಧಿಕಾರದ ಅವಶ್ಯಕತೆ ಇದ್ದ ಕಾರಣ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ರಚನೆಯಾಯಿತು. ನಗರ ಅಭಿವೃದ್ಧಿಗಾಗಿ ನಮ್ಮ ಸದಸ್ಯರು ಹಾಗೂ ಟಿ.ವೆಂಕರಮಣಯ್ಯರವರ ಸಹಕಾರದೊಂದಿಗೆ  ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಲಾಗುವುದು ಎಂದರು.

ನಂತರ ಮಾತನಾಡಿದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಈ ಹಿಂದಿನ ಸಾಲಿನಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ, ಪ್ರಸ್ತುತ ಇರುವ ಶಾಸಕರು ಅನುದಾನ ಪಡೆದು ಅಭಿವೃದ್ಧಿ ಮಾಡಬೇಕು.

ಗ್ಯಾರಂಟಿ ಯೋಜನೆಗಳಿಂದ ಬಡಜನರು, ಕೂಲಿಕಾರ್ಮಿಕರು ಹಾಗೂ ರೈತರಿಗೆ ಬಹಳ ಉಪಯುಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಅಕ್ರೊಶವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ನೂತನ ಸದಸ್ಯರುಗಳಾದ ರಾಮಕೃಷ್ಣಯ್ಯ.ಟಿ, ಅಂಜನಮೂರ್ತಿ, ಅಪ್ಪಿ ವೆಂಕಟೇಶ್ ಸೇರಿದಂತೆ ತಾಲೂಕಿನ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

3 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

6 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

17 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

18 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

20 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

22 hours ago