ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಸ್ತಿತ್ವದಿಂದ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು, ಅತೀ ಮುಖ್ಯವಾಗಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ವಿ.ಚುಂಚೆಗೌಡ ತಿಳಿಸಿದರು.
ನಗರದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ನಾಯಕರು ಹಾಗೂ ತಾಲೂಕಿನ ಮಾಜಿ ಶಾಸಕ ಟಿ.ವೆಂಕಟರಮಣಯ್ಯರವರ ಪ್ರಯತ್ನದಿಂದಾಗಿ ಯೋಜನಾ ಪ್ರಾಧಿಕಾರ ಅಧ್ಯಕ್ಷನಾಗಿದ್ದೇನೆ. ನಮ್ಮ ನಗರಕ್ಕೆ ಯೋಜನಾ ಪ್ರಾಧಿಕಾರದ ಅವಶ್ಯಕತೆ ಇದ್ದ ಕಾರಣ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ರಚನೆಯಾಯಿತು. ನಗರ ಅಭಿವೃದ್ಧಿಗಾಗಿ ನಮ್ಮ ಸದಸ್ಯರು ಹಾಗೂ ಟಿ.ವೆಂಕರಮಣಯ್ಯರವರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.
ನಂತರ ಮಾತನಾಡಿದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಈ ಹಿಂದಿನ ಸಾಲಿನಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ, ಪ್ರಸ್ತುತ ಇರುವ ಶಾಸಕರು ಅನುದಾನ ಪಡೆದು ಅಭಿವೃದ್ಧಿ ಮಾಡಬೇಕು.
ಗ್ಯಾರಂಟಿ ಯೋಜನೆಗಳಿಂದ ಬಡಜನರು, ಕೂಲಿಕಾರ್ಮಿಕರು ಹಾಗೂ ರೈತರಿಗೆ ಬಹಳ ಉಪಯುಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಅಕ್ರೊಶವ್ಯಕ್ತಪಡಿಸಿದರು.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…