ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಸ್ತಿತ್ವದಿಂದ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು, ಅತೀ ಮುಖ್ಯವಾಗಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ವಿ.ಚುಂಚೆಗೌಡ ತಿಳಿಸಿದರು.
ನಗರದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ನಾಯಕರು ಹಾಗೂ ತಾಲೂಕಿನ ಮಾಜಿ ಶಾಸಕ ಟಿ.ವೆಂಕಟರಮಣಯ್ಯರವರ ಪ್ರಯತ್ನದಿಂದಾಗಿ ಯೋಜನಾ ಪ್ರಾಧಿಕಾರ ಅಧ್ಯಕ್ಷನಾಗಿದ್ದೇನೆ. ನಮ್ಮ ನಗರಕ್ಕೆ ಯೋಜನಾ ಪ್ರಾಧಿಕಾರದ ಅವಶ್ಯಕತೆ ಇದ್ದ ಕಾರಣ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ರಚನೆಯಾಯಿತು. ನಗರ ಅಭಿವೃದ್ಧಿಗಾಗಿ ನಮ್ಮ ಸದಸ್ಯರು ಹಾಗೂ ಟಿ.ವೆಂಕರಮಣಯ್ಯರವರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.
ನಂತರ ಮಾತನಾಡಿದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಈ ಹಿಂದಿನ ಸಾಲಿನಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ, ಪ್ರಸ್ತುತ ಇರುವ ಶಾಸಕರು ಅನುದಾನ ಪಡೆದು ಅಭಿವೃದ್ಧಿ ಮಾಡಬೇಕು.
ಗ್ಯಾರಂಟಿ ಯೋಜನೆಗಳಿಂದ ಬಡಜನರು, ಕೂಲಿಕಾರ್ಮಿಕರು ಹಾಗೂ ರೈತರಿಗೆ ಬಹಳ ಉಪಯುಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಅಕ್ರೊಶವ್ಯಕ್ತಪಡಿಸಿದರು.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…