ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಸ್ತಿತ್ವದಿಂದ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು, ಅತೀ ಮುಖ್ಯವಾಗಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ವಿ.ಚುಂಚೆಗೌಡ ತಿಳಿಸಿದರು.
ನಗರದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ನಾಯಕರು ಹಾಗೂ ತಾಲೂಕಿನ ಮಾಜಿ ಶಾಸಕ ಟಿ.ವೆಂಕಟರಮಣಯ್ಯರವರ ಪ್ರಯತ್ನದಿಂದಾಗಿ ಯೋಜನಾ ಪ್ರಾಧಿಕಾರ ಅಧ್ಯಕ್ಷನಾಗಿದ್ದೇನೆ. ನಮ್ಮ ನಗರಕ್ಕೆ ಯೋಜನಾ ಪ್ರಾಧಿಕಾರದ ಅವಶ್ಯಕತೆ ಇದ್ದ ಕಾರಣ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ರಚನೆಯಾಯಿತು. ನಗರ ಅಭಿವೃದ್ಧಿಗಾಗಿ ನಮ್ಮ ಸದಸ್ಯರು ಹಾಗೂ ಟಿ.ವೆಂಕರಮಣಯ್ಯರವರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.
ನಂತರ ಮಾತನಾಡಿದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಈ ಹಿಂದಿನ ಸಾಲಿನಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ, ಪ್ರಸ್ತುತ ಇರುವ ಶಾಸಕರು ಅನುದಾನ ಪಡೆದು ಅಭಿವೃದ್ಧಿ ಮಾಡಬೇಕು.
ಗ್ಯಾರಂಟಿ ಯೋಜನೆಗಳಿಂದ ಬಡಜನರು, ಕೂಲಿಕಾರ್ಮಿಕರು ಹಾಗೂ ರೈತರಿಗೆ ಬಹಳ ಉಪಯುಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಅಕ್ರೊಶವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…