ತಾಲೂಕಿನ ಅಭಿವೃದ್ಧಿ ಜೊತೆಗೆ ಕೆರೆಗಳ ಅಭಿವೃದ್ಧಿಗೂ ಶ್ರಮಿಸುತ್ತೇನೆ- ನೂತನ ಅಧ್ಯಕ್ಷ ವಿ.ಚುಂಚೆಗೌಡ

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಸ್ತಿತ್ವದಿಂದ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು, ಅತೀ ಮುಖ್ಯವಾಗಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು ಎಂದು‌ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ವಿ.ಚುಂಚೆಗೌಡ ತಿಳಿಸಿದರು.

ನಗರದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ನಮ್ಮ ರಾಜ್ಯದ ನಾಯಕರು ಹಾಗೂ ತಾಲೂಕಿನ ಮಾಜಿ ಶಾಸಕ ಟಿ.ವೆಂಕಟರಮಣಯ್ಯರವರ ಪ್ರಯತ್ನದಿಂದಾಗಿ ಯೋಜನಾ ಪ್ರಾಧಿಕಾರ ಅಧ್ಯಕ್ಷನಾಗಿದ್ದೇನೆ. ನಮ್ಮ ನಗರಕ್ಕೆ ಯೋಜನಾ ಪ್ರಾಧಿಕಾರದ ಅವಶ್ಯಕತೆ ಇದ್ದ ಕಾರಣ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ರಚನೆಯಾಯಿತು. ನಗರ ಅಭಿವೃದ್ಧಿಗಾಗಿ ನಮ್ಮ ಸದಸ್ಯರು ಹಾಗೂ ಟಿ.ವೆಂಕರಮಣಯ್ಯರವರ ಸಹಕಾರದೊಂದಿಗೆ  ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಲಾಗುವುದು ಎಂದರು.

ನಂತರ ಮಾತನಾಡಿದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಈ ಹಿಂದಿನ ಸಾಲಿನಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ, ಪ್ರಸ್ತುತ ಇರುವ ಶಾಸಕರು ಅನುದಾನ ಪಡೆದು ಅಭಿವೃದ್ಧಿ ಮಾಡಬೇಕು.

ಗ್ಯಾರಂಟಿ ಯೋಜನೆಗಳಿಂದ ಬಡಜನರು, ಕೂಲಿಕಾರ್ಮಿಕರು ಹಾಗೂ ರೈತರಿಗೆ ಬಹಳ ಉಪಯುಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಅಕ್ರೊಶವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ನೂತನ ಸದಸ್ಯರುಗಳಾದ ರಾಮಕೃಷ್ಣಯ್ಯ.ಟಿ, ಅಂಜನಮೂರ್ತಿ, ಅಪ್ಪಿ ವೆಂಕಟೇಶ್ ಸೇರಿದಂತೆ ತಾಲೂಕಿನ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

19 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago