ನಗರಸಭೆಯ ಮೊದಲನೇ ಅವಧಿಯ ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರಾವಧಿ ಮುಗಿದ ಹಿನ್ನೆಲೆ ಶುಕ್ರವಾರ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಪಕ್ಷದ ನಗರಸಭೆ ಸದಸ್ಯರು ಒಮ್ಮತವಾಗಿ ನನ್ನನ್ನು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವುದು ಸಂತಸದ ಸಂಗತಿ. ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ (ವಡ್ಡರಹಳ್ಳಿ ರವಿ) ಹೇಳಿದರು.
ನಗರಸಭೆ ವ್ಯಾಪ್ತಿಯ ವಾರ್ಡ್ ಗಳ ಸರ್ವತೋಮುಖ ಅಭಿವೃದ್ಧಿಗೆ ನಗರಸಭೆ ಅನುದಾನ ಸಾಕಾಗುವುದಿಲ್ಲ, ಎಂಎಲ್ ಸಿ, ಎಂಎಲ್ ಎ ಅನುದಾನವೂ ಬೇಕಾಗುತ್ತದೆ, ಈ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬಿಡುಗಡೆ ಆಗಿದ್ದ ಅನುದಾನವನ್ನು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ವರ್ಗಾವಣೆ ಮಾಡಿರುವುದು ಸರ್ಕಾರದ ಸ್ವಾರ್ಥದ ಮನೋಭಾವನೆ. ಅಂದಿನ ಬಿಜೆಪಿ ಸರ್ಕಾರ ಅಳೆದು ತೂಗಿ ದೊಡ್ಡಬಳ್ಳಾಪುರ ತಾಲೂಕಿನ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ದೊಡ್ಡಬಳ್ಳಾಪುರ ಬದಲಿಗೆ ದೇವನಹಳ್ಳಿಗೆ ವರ್ಗಾಯಿಸಿರುವುದು ಪ್ರಶ್ನಾತೀತವಾಗಿದೆ ಎಂದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್. ಅಪ್ಪಯ್ಯಣ್ಣ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿ ನಾರಾಯಣ್, ಉಪಾಧ್ಯಕ್ಷೆ ಫರ್ಹಾನ ತಾಜ್, ಎ.ನರಸಿಂಹಯ್ಯ, ತಾ.ನ.ಪ್ರಭುದೇವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…