ನಗರಸಭೆಯ ಮೊದಲನೇ ಅವಧಿಯ ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರಾವಧಿ ಮುಗಿದ ಹಿನ್ನೆಲೆ ಶುಕ್ರವಾರ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಪಕ್ಷದ ನಗರಸಭೆ ಸದಸ್ಯರು ಒಮ್ಮತವಾಗಿ ನನ್ನನ್ನು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವುದು ಸಂತಸದ ಸಂಗತಿ. ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ (ವಡ್ಡರಹಳ್ಳಿ ರವಿ) ಹೇಳಿದರು.
ನಗರಸಭೆ ವ್ಯಾಪ್ತಿಯ ವಾರ್ಡ್ ಗಳ ಸರ್ವತೋಮುಖ ಅಭಿವೃದ್ಧಿಗೆ ನಗರಸಭೆ ಅನುದಾನ ಸಾಕಾಗುವುದಿಲ್ಲ, ಎಂಎಲ್ ಸಿ, ಎಂಎಲ್ ಎ ಅನುದಾನವೂ ಬೇಕಾಗುತ್ತದೆ, ಈ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬಿಡುಗಡೆ ಆಗಿದ್ದ ಅನುದಾನವನ್ನು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ವರ್ಗಾವಣೆ ಮಾಡಿರುವುದು ಸರ್ಕಾರದ ಸ್ವಾರ್ಥದ ಮನೋಭಾವನೆ. ಅಂದಿನ ಬಿಜೆಪಿ ಸರ್ಕಾರ ಅಳೆದು ತೂಗಿ ದೊಡ್ಡಬಳ್ಳಾಪುರ ತಾಲೂಕಿನ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ದೊಡ್ಡಬಳ್ಳಾಪುರ ಬದಲಿಗೆ ದೇವನಹಳ್ಳಿಗೆ ವರ್ಗಾಯಿಸಿರುವುದು ಪ್ರಶ್ನಾತೀತವಾಗಿದೆ ಎಂದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್. ಅಪ್ಪಯ್ಯಣ್ಣ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿ ನಾರಾಯಣ್, ಉಪಾಧ್ಯಕ್ಷೆ ಫರ್ಹಾನ ತಾಜ್, ಎ.ನರಸಿಂಹಯ್ಯ, ತಾ.ನ.ಪ್ರಭುದೇವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…