ನಗರಸಭೆಯ ಮೊದಲನೇ ಅವಧಿಯ ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರಾವಧಿ ಮುಗಿದ ಹಿನ್ನೆಲೆ ಶುಕ್ರವಾರ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಪಕ್ಷದ ನಗರಸಭೆ ಸದಸ್ಯರು ಒಮ್ಮತವಾಗಿ ನನ್ನನ್ನು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವುದು ಸಂತಸದ ಸಂಗತಿ. ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ (ವಡ್ಡರಹಳ್ಳಿ ರವಿ) ಹೇಳಿದರು.
ನಗರಸಭೆ ವ್ಯಾಪ್ತಿಯ ವಾರ್ಡ್ ಗಳ ಸರ್ವತೋಮುಖ ಅಭಿವೃದ್ಧಿಗೆ ನಗರಸಭೆ ಅನುದಾನ ಸಾಕಾಗುವುದಿಲ್ಲ, ಎಂಎಲ್ ಸಿ, ಎಂಎಲ್ ಎ ಅನುದಾನವೂ ಬೇಕಾಗುತ್ತದೆ, ಈ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬಿಡುಗಡೆ ಆಗಿದ್ದ ಅನುದಾನವನ್ನು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ವರ್ಗಾವಣೆ ಮಾಡಿರುವುದು ಸರ್ಕಾರದ ಸ್ವಾರ್ಥದ ಮನೋಭಾವನೆ. ಅಂದಿನ ಬಿಜೆಪಿ ಸರ್ಕಾರ ಅಳೆದು ತೂಗಿ ದೊಡ್ಡಬಳ್ಳಾಪುರ ತಾಲೂಕಿನ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ದೊಡ್ಡಬಳ್ಳಾಪುರ ಬದಲಿಗೆ ದೇವನಹಳ್ಳಿಗೆ ವರ್ಗಾಯಿಸಿರುವುದು ಪ್ರಶ್ನಾತೀತವಾಗಿದೆ ಎಂದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್. ಅಪ್ಪಯ್ಯಣ್ಣ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿ ನಾರಾಯಣ್, ಉಪಾಧ್ಯಕ್ಷೆ ಫರ್ಹಾನ ತಾಜ್, ಎ.ನರಸಿಂಹಯ್ಯ, ತಾ.ನ.ಪ್ರಭುದೇವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…