ನರಸಿಂಹರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ, ತಾಲೂಕಿನ ಆರೂಢಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಹೆಚ್.ಎಲ್.ಶ್ರೀಧರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
18 ಸದಸ್ಯತ್ವ ಬಲದ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ, ಉಪ ಚುನಾವಣೆ ಅಧಿಕಾರಿ ಮಲ್ಲೇಶ್ ಅವರ ಸಮ್ಮುಖದಲ್ಲಿ ಬುಧವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಶ್ರೀಧರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಶ್ರೀಧರ್ ಗ್ರಾಮಪಂಚಾಯಿತಿಯಲ್ಲಿ ನನ್ನ ಅಧಿಕಾರವಧಿಯಲ್ಲಿ ಜನಾನುರಾಗಿಯಾಗಿ ಕೆಲಸ ಮಾಡಲಾಗುವುದು. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಪದೇ ಪದೇ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕ್ರಮಕೈಗೊಳ್ಳಲಾಗುವುದು. ಯಾವುದೇ ಅಕ್ರಮ, ಅನ್ಯಾಯಗಳಿಗೆ ಅವಕಾಶವಿಲ್ಲದಂತೆ ಕರ್ತವ್ಯ ನಿರ್ವಹಣೆ ಮಾಡಲಾಗುವುದು ಎಂದರು.
ನೂತನವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಶ್ರೀಧರ್ ಅವರನ್ನು ಅವರನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿ, ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಧೀರಜ್, ಮುಖಂಡರಾದ ಸಾರಥಿ ಸತ್ಯಪ್ರಕಾಶ್, ಪುಷ್ಪಾಶಿವಶಂಕರ್, ಮಾರುತಿ, ಶರತ್ ಕುಮಾರ್, ಸಿದ್ದಗಂಗಯ್ಯ, ಮಾಜಿ ಅಧ್ಯಕ್ಷರಾದ ಜಯಮ್ಮಪ್ರಭು, ನರಸಿಂಹರಾಜು, ಸದಸ್ಯರಾದ ರಾಮಕೃಷ್ಣಪ್ಪ, ರಂಗಚಾರಿ, ಗ್ರಾಮಸ್ಥರು ಶುಭಕೋರಿದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…