ತಾಲೂಕಿನ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್ ಅವಿರೋಧ ಆಯ್ಕೆ: ಗಣ್ಯರ ಅಭಿನಂದನೆ

ತಾಲೂಕಿನ ಕೃಷಿಕ ಸಮಾಜದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ್, ಖಜಾಂಚಿಯಾಗಿ ಎ.ಮುನಿಆಂಜಿನಪ್ಪ, ಜಿಲ್ಲಾ ಪ್ರತಿನಿಧಿಯಾಗಿ ಅಶೋಕ್.ಟಿ.ಎಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸದಸ್ಯಯರಿಗೆ ಗಣ್ಯರು ಪುಷ್ಪಮಾಲೆ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ಕೃಷಿ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಆಯ್ಕೆಯಾದವರನ್ನ ಹೊರತುಪಡಿಸಿ ಬೇರೆಯವರು ತಮ್ಮ ನಾಮಪತ್ರಗಳನ್ನ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ಸಹಾಯಕ ಕೃಷಿ ನಿರ್ದೇಶಕರು ಅವಿರೋಧ ಆಯ್ಕೆಯನ್ನ ಪ್ರಕಟಿಸಿದ್ದಾರೆ.
ಆಯ್ಕೆಯಾದವರ ಅವಧಿ 5 ವರ್ಷಗಳಾಗಿದ್ದು, 2029-30ನೇ ಸಾಲಿನಲ್ಲಿ ಇವರ ಅವಧಿ ಅಂತ್ಯವಾಗಲಿದೆ .
ಮಾಧ್ಯಮದೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಮುರುಳಿಧರ್.ಆರ್, ಅವಿರೋದವಾಗಿ ಆಯ್ಕೆಯಾಗಲು ಸಹಾಕರಿಸಿದ ಎಲ್ಲ ಮುಖಂಡರಿಗೂ ಕೃತಜ್ಞನೆ ಸಲ್ಲಿಸುವೆ, ಅಧ್ಯಕ್ಷನಾಗಿ ನನ್ನ ಮುಖ್ಯ ಉದ್ದೇಶ ದೊಡ್ಡಬಳ್ಳಾಪುರ ಕೃಷಿಕ ಸಮಾಜಕ್ಕೆ ಕಟ್ಟಡ ನಿರ್ಮಾಣ ಮಾಡುವುದು, ಈ ಕುರಿತು ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಆಹಾರ ಸಚಿವ  ಕೆ.ಎಚ್.ಮುನಿಯಪ್ಪ ಬಳಿ ಮನವಿ ಮಾಡಲಾಗುವುದು. ಹಾಗೆಯೇ ಸರ್ಕಾರದಿಂದ ಸಿಗುವ ಸವಲತ್ತುಗಳನ್ನ ನೇರವಾಗಿ ರೈತರಿಗೆ ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಉಪಾಧ್ಯಕ್ಷರಾದ ಅರಸೇಗೌಡ.ಕೆ.ಎಚ್ ಮಾತನಾಡಿ, ಹಿರಿಯರ ಮಾರ್ಗದರ್ಶನಂತೆ ನಾನು ಕೆಲಸ ಮಾಡುತ್ತೇನೆ, ಅವರ ಹೆಸರಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಕೆಲಸ ಮಾಡುವೆ, ಸ್ವತಹ ನಾನು ರೈತನಾಗಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳು ಅರಿವು ನನಗೆ ಇರುವುದರಿಂದ ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ಮುಖಂಡರಾದ ರಂಗಪ್ಪ ಮಾತನಾಡಿ, ಕೆಲವು ದುಷ್ಟ ಶಕ್ತಿಗಳು ಕೃಷಿ ಸಮಾಜಕ್ಕೆ ಚುನಾವಣೆಯಾಗದಂತೆ ತಡೆದಿದ್ದರು, ಅದೀಗ ದೂರವಾಗಿದೆ. ಎಲ್ಲ ಪಕ್ಷದವರನ್ನು ಹೊಂದಾಣಿಕೆ ಮಾಡಿಕೊಂಡು ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪರಸ್ಪರ ಹೊಂದಾಣಿಕೆ ಮೂಲಕ ಅಧಿಕಾರವನ್ನ ಹಂಚಿಕೆ ಮಾಡಲಾಗಿದ್ದು, ಮುಂದಿನ ಅವಧಿಯಲ್ಲೂ ಅಧಿಕಾರ ಹಂಚಿಕೆ ಮಾಡಿಕೊಂಡು ರೈತರ ಪರವಾಗಿ ಕೆಲಸ ಮಾಡುವ ಕೆಲಸ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು, ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಜಾರಿಗೆ ಬರಲಿದ್ದು, ಅರ್ಹ ರೈತರನ್ನು ಗುರಿತಿಸಿ ಯೋಜನೆಯ ಲಾಭ ಸಿಗುವ ಪ್ರಮಾಣಿಕ ಕೆಲಸ ಮಾಡುವುದ್ದಾಗಿ ಹೇಳಿದರು.
ಅವಿರೋಧವಾಗಿ ಆಯ್ಕೆಯಾದ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀನಿವಾಸ, ಎ.ರವೀಂದ್ರ, ಪಿ.ನಾಗರಾಜು, ಮಂಜುನಾಥ್, ಎಂ.ಗೋಪಾಲರೆಡ್ಡಿ, ಜಿ.ಆರ್.ಅಶೋಕ್, ಆರ್.ಕೃಷ್ಣಮೂರ್ತಿ,ಟಿ.ವಿ.ರವಿಕುಮಾರ್, ಆರ್.ಜಯರಾಮಯ್ಯ, ಕೆ.ನರಸಿಂಹಯ್ಯರವರನ್ನು ಅಭಿನಂದಿಸಲಾಯಿತು.
ಈ ವೇಳೆ ಅಧ್ಯಕ್ಷ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಜಿಲ್ಲಾ ಪಂಚಾಯತಿ ಸದಸ್ಯ ಅರವಿಂದ್, ದೇವನಹಳ್ಳಿ ರವಿ ಕುಮಾರ್, ಕಾಂಗ್ರೆಸ್ ಮುಖಂಡ ರವಿ ಸಿದ್ದಪ್ಪ, ಭೂ ಮಂಜೂರಾತಿ ಸದಸ್ಯ ಶ್ರೀಧರ್.ಜಿ.ಕೆ ಗಂಗಸಂದ್ರ , ವಕೀಲರಾದ ಆರ್ ವಿ ಶಿವಕುಮಾರ್ ಸೇರಿದಂತೆ ತಾಲೂಕಿನ ಮುಖಂಡರು ಇದ್ದರು.
Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

8 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

8 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

9 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

10 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

12 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

19 hours ago