ತಾಲೂಕಿನ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್ ಅವಿರೋಧ ಆಯ್ಕೆ: ಗಣ್ಯರ ಅಭಿನಂದನೆ

ತಾಲೂಕಿನ ಕೃಷಿಕ ಸಮಾಜದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ್, ಖಜಾಂಚಿಯಾಗಿ ಎ.ಮುನಿಆಂಜಿನಪ್ಪ, ಜಿಲ್ಲಾ ಪ್ರತಿನಿಧಿಯಾಗಿ ಅಶೋಕ್.ಟಿ.ಎಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸದಸ್ಯಯರಿಗೆ ಗಣ್ಯರು ಪುಷ್ಪಮಾಲೆ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ಕೃಷಿ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಆಯ್ಕೆಯಾದವರನ್ನ ಹೊರತುಪಡಿಸಿ ಬೇರೆಯವರು ತಮ್ಮ ನಾಮಪತ್ರಗಳನ್ನ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ಸಹಾಯಕ ಕೃಷಿ ನಿರ್ದೇಶಕರು ಅವಿರೋಧ ಆಯ್ಕೆಯನ್ನ ಪ್ರಕಟಿಸಿದ್ದಾರೆ.
ಆಯ್ಕೆಯಾದವರ ಅವಧಿ 5 ವರ್ಷಗಳಾಗಿದ್ದು, 2029-30ನೇ ಸಾಲಿನಲ್ಲಿ ಇವರ ಅವಧಿ ಅಂತ್ಯವಾಗಲಿದೆ .
ಮಾಧ್ಯಮದೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಮುರುಳಿಧರ್.ಆರ್, ಅವಿರೋದವಾಗಿ ಆಯ್ಕೆಯಾಗಲು ಸಹಾಕರಿಸಿದ ಎಲ್ಲ ಮುಖಂಡರಿಗೂ ಕೃತಜ್ಞನೆ ಸಲ್ಲಿಸುವೆ, ಅಧ್ಯಕ್ಷನಾಗಿ ನನ್ನ ಮುಖ್ಯ ಉದ್ದೇಶ ದೊಡ್ಡಬಳ್ಳಾಪುರ ಕೃಷಿಕ ಸಮಾಜಕ್ಕೆ ಕಟ್ಟಡ ನಿರ್ಮಾಣ ಮಾಡುವುದು, ಈ ಕುರಿತು ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಆಹಾರ ಸಚಿವ  ಕೆ.ಎಚ್.ಮುನಿಯಪ್ಪ ಬಳಿ ಮನವಿ ಮಾಡಲಾಗುವುದು. ಹಾಗೆಯೇ ಸರ್ಕಾರದಿಂದ ಸಿಗುವ ಸವಲತ್ತುಗಳನ್ನ ನೇರವಾಗಿ ರೈತರಿಗೆ ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಉಪಾಧ್ಯಕ್ಷರಾದ ಅರಸೇಗೌಡ.ಕೆ.ಎಚ್ ಮಾತನಾಡಿ, ಹಿರಿಯರ ಮಾರ್ಗದರ್ಶನಂತೆ ನಾನು ಕೆಲಸ ಮಾಡುತ್ತೇನೆ, ಅವರ ಹೆಸರಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಕೆಲಸ ಮಾಡುವೆ, ಸ್ವತಹ ನಾನು ರೈತನಾಗಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳು ಅರಿವು ನನಗೆ ಇರುವುದರಿಂದ ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ಮುಖಂಡರಾದ ರಂಗಪ್ಪ ಮಾತನಾಡಿ, ಕೆಲವು ದುಷ್ಟ ಶಕ್ತಿಗಳು ಕೃಷಿ ಸಮಾಜಕ್ಕೆ ಚುನಾವಣೆಯಾಗದಂತೆ ತಡೆದಿದ್ದರು, ಅದೀಗ ದೂರವಾಗಿದೆ. ಎಲ್ಲ ಪಕ್ಷದವರನ್ನು ಹೊಂದಾಣಿಕೆ ಮಾಡಿಕೊಂಡು ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪರಸ್ಪರ ಹೊಂದಾಣಿಕೆ ಮೂಲಕ ಅಧಿಕಾರವನ್ನ ಹಂಚಿಕೆ ಮಾಡಲಾಗಿದ್ದು, ಮುಂದಿನ ಅವಧಿಯಲ್ಲೂ ಅಧಿಕಾರ ಹಂಚಿಕೆ ಮಾಡಿಕೊಂಡು ರೈತರ ಪರವಾಗಿ ಕೆಲಸ ಮಾಡುವ ಕೆಲಸ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು, ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಜಾರಿಗೆ ಬರಲಿದ್ದು, ಅರ್ಹ ರೈತರನ್ನು ಗುರಿತಿಸಿ ಯೋಜನೆಯ ಲಾಭ ಸಿಗುವ ಪ್ರಮಾಣಿಕ ಕೆಲಸ ಮಾಡುವುದ್ದಾಗಿ ಹೇಳಿದರು.
ಅವಿರೋಧವಾಗಿ ಆಯ್ಕೆಯಾದ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀನಿವಾಸ, ಎ.ರವೀಂದ್ರ, ಪಿ.ನಾಗರಾಜು, ಮಂಜುನಾಥ್, ಎಂ.ಗೋಪಾಲರೆಡ್ಡಿ, ಜಿ.ಆರ್.ಅಶೋಕ್, ಆರ್.ಕೃಷ್ಣಮೂರ್ತಿ,ಟಿ.ವಿ.ರವಿಕುಮಾರ್, ಆರ್.ಜಯರಾಮಯ್ಯ, ಕೆ.ನರಸಿಂಹಯ್ಯರವರನ್ನು ಅಭಿನಂದಿಸಲಾಯಿತು.
ಈ ವೇಳೆ ಅಧ್ಯಕ್ಷ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಜಿಲ್ಲಾ ಪಂಚಾಯತಿ ಸದಸ್ಯ ಅರವಿಂದ್, ದೇವನಹಳ್ಳಿ ರವಿ ಕುಮಾರ್, ಕಾಂಗ್ರೆಸ್ ಮುಖಂಡ ರವಿ ಸಿದ್ದಪ್ಪ, ಭೂ ಮಂಜೂರಾತಿ ಸದಸ್ಯ ಶ್ರೀಧರ್.ಜಿ.ಕೆ ಗಂಗಸಂದ್ರ , ವಕೀಲರಾದ ಆರ್ ವಿ ಶಿವಕುಮಾರ್ ಸೇರಿದಂತೆ ತಾಲೂಕಿನ ಮುಖಂಡರು ಇದ್ದರು.
Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

5 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

5 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

18 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

20 hours ago