ತಾಲೂಕಿನ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್ ಅವಿರೋಧ ಆಯ್ಕೆ: ಗಣ್ಯರ ಅಭಿನಂದನೆ

ತಾಲೂಕಿನ ಕೃಷಿಕ ಸಮಾಜದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ್, ಖಜಾಂಚಿಯಾಗಿ ಎ.ಮುನಿಆಂಜಿನಪ್ಪ, ಜಿಲ್ಲಾ ಪ್ರತಿನಿಧಿಯಾಗಿ ಅಶೋಕ್.ಟಿ.ಎಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸದಸ್ಯಯರಿಗೆ ಗಣ್ಯರು ಪುಷ್ಪಮಾಲೆ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ಕೃಷಿ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಆಯ್ಕೆಯಾದವರನ್ನ ಹೊರತುಪಡಿಸಿ ಬೇರೆಯವರು ತಮ್ಮ ನಾಮಪತ್ರಗಳನ್ನ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ಸಹಾಯಕ ಕೃಷಿ ನಿರ್ದೇಶಕರು ಅವಿರೋಧ ಆಯ್ಕೆಯನ್ನ ಪ್ರಕಟಿಸಿದ್ದಾರೆ.
ಆಯ್ಕೆಯಾದವರ ಅವಧಿ 5 ವರ್ಷಗಳಾಗಿದ್ದು, 2029-30ನೇ ಸಾಲಿನಲ್ಲಿ ಇವರ ಅವಧಿ ಅಂತ್ಯವಾಗಲಿದೆ .
ಮಾಧ್ಯಮದೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಮುರುಳಿಧರ್.ಆರ್, ಅವಿರೋದವಾಗಿ ಆಯ್ಕೆಯಾಗಲು ಸಹಾಕರಿಸಿದ ಎಲ್ಲ ಮುಖಂಡರಿಗೂ ಕೃತಜ್ಞನೆ ಸಲ್ಲಿಸುವೆ, ಅಧ್ಯಕ್ಷನಾಗಿ ನನ್ನ ಮುಖ್ಯ ಉದ್ದೇಶ ದೊಡ್ಡಬಳ್ಳಾಪುರ ಕೃಷಿಕ ಸಮಾಜಕ್ಕೆ ಕಟ್ಟಡ ನಿರ್ಮಾಣ ಮಾಡುವುದು, ಈ ಕುರಿತು ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಆಹಾರ ಸಚಿವ  ಕೆ.ಎಚ್.ಮುನಿಯಪ್ಪ ಬಳಿ ಮನವಿ ಮಾಡಲಾಗುವುದು. ಹಾಗೆಯೇ ಸರ್ಕಾರದಿಂದ ಸಿಗುವ ಸವಲತ್ತುಗಳನ್ನ ನೇರವಾಗಿ ರೈತರಿಗೆ ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಉಪಾಧ್ಯಕ್ಷರಾದ ಅರಸೇಗೌಡ.ಕೆ.ಎಚ್ ಮಾತನಾಡಿ, ಹಿರಿಯರ ಮಾರ್ಗದರ್ಶನಂತೆ ನಾನು ಕೆಲಸ ಮಾಡುತ್ತೇನೆ, ಅವರ ಹೆಸರಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಕೆಲಸ ಮಾಡುವೆ, ಸ್ವತಹ ನಾನು ರೈತನಾಗಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳು ಅರಿವು ನನಗೆ ಇರುವುದರಿಂದ ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ಮುಖಂಡರಾದ ರಂಗಪ್ಪ ಮಾತನಾಡಿ, ಕೆಲವು ದುಷ್ಟ ಶಕ್ತಿಗಳು ಕೃಷಿ ಸಮಾಜಕ್ಕೆ ಚುನಾವಣೆಯಾಗದಂತೆ ತಡೆದಿದ್ದರು, ಅದೀಗ ದೂರವಾಗಿದೆ. ಎಲ್ಲ ಪಕ್ಷದವರನ್ನು ಹೊಂದಾಣಿಕೆ ಮಾಡಿಕೊಂಡು ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪರಸ್ಪರ ಹೊಂದಾಣಿಕೆ ಮೂಲಕ ಅಧಿಕಾರವನ್ನ ಹಂಚಿಕೆ ಮಾಡಲಾಗಿದ್ದು, ಮುಂದಿನ ಅವಧಿಯಲ್ಲೂ ಅಧಿಕಾರ ಹಂಚಿಕೆ ಮಾಡಿಕೊಂಡು ರೈತರ ಪರವಾಗಿ ಕೆಲಸ ಮಾಡುವ ಕೆಲಸ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು, ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಜಾರಿಗೆ ಬರಲಿದ್ದು, ಅರ್ಹ ರೈತರನ್ನು ಗುರಿತಿಸಿ ಯೋಜನೆಯ ಲಾಭ ಸಿಗುವ ಪ್ರಮಾಣಿಕ ಕೆಲಸ ಮಾಡುವುದ್ದಾಗಿ ಹೇಳಿದರು.
ಅವಿರೋಧವಾಗಿ ಆಯ್ಕೆಯಾದ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀನಿವಾಸ, ಎ.ರವೀಂದ್ರ, ಪಿ.ನಾಗರಾಜು, ಮಂಜುನಾಥ್, ಎಂ.ಗೋಪಾಲರೆಡ್ಡಿ, ಜಿ.ಆರ್.ಅಶೋಕ್, ಆರ್.ಕೃಷ್ಣಮೂರ್ತಿ,ಟಿ.ವಿ.ರವಿಕುಮಾರ್, ಆರ್.ಜಯರಾಮಯ್ಯ, ಕೆ.ನರಸಿಂಹಯ್ಯರವರನ್ನು ಅಭಿನಂದಿಸಲಾಯಿತು.
ಈ ವೇಳೆ ಅಧ್ಯಕ್ಷ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಜಿಲ್ಲಾ ಪಂಚಾಯತಿ ಸದಸ್ಯ ಅರವಿಂದ್, ದೇವನಹಳ್ಳಿ ರವಿ ಕುಮಾರ್, ಕಾಂಗ್ರೆಸ್ ಮುಖಂಡ ರವಿ ಸಿದ್ದಪ್ಪ, ಭೂ ಮಂಜೂರಾತಿ ಸದಸ್ಯ ಶ್ರೀಧರ್.ಜಿ.ಕೆ ಗಂಗಸಂದ್ರ , ವಕೀಲರಾದ ಆರ್ ವಿ ಶಿವಕುಮಾರ್ ಸೇರಿದಂತೆ ತಾಲೂಕಿನ ಮುಖಂಡರು ಇದ್ದರು.
Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

4 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

5 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

11 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

22 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

23 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

24 hours ago