ತಾಲೂಕಿನ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್ ಅವಿರೋಧ ಆಯ್ಕೆ: ಗಣ್ಯರ ಅಭಿನಂದನೆ

ತಾಲೂಕಿನ ಕೃಷಿಕ ಸಮಾಜದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ್, ಖಜಾಂಚಿಯಾಗಿ ಎ.ಮುನಿಆಂಜಿನಪ್ಪ, ಜಿಲ್ಲಾ ಪ್ರತಿನಿಧಿಯಾಗಿ ಅಶೋಕ್.ಟಿ.ಎಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸದಸ್ಯಯರಿಗೆ ಗಣ್ಯರು ಪುಷ್ಪಮಾಲೆ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ಕೃಷಿ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಆಯ್ಕೆಯಾದವರನ್ನ ಹೊರತುಪಡಿಸಿ ಬೇರೆಯವರು ತಮ್ಮ ನಾಮಪತ್ರಗಳನ್ನ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ಸಹಾಯಕ ಕೃಷಿ ನಿರ್ದೇಶಕರು ಅವಿರೋಧ ಆಯ್ಕೆಯನ್ನ ಪ್ರಕಟಿಸಿದ್ದಾರೆ.
ಆಯ್ಕೆಯಾದವರ ಅವಧಿ 5 ವರ್ಷಗಳಾಗಿದ್ದು, 2029-30ನೇ ಸಾಲಿನಲ್ಲಿ ಇವರ ಅವಧಿ ಅಂತ್ಯವಾಗಲಿದೆ .
ಮಾಧ್ಯಮದೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಮುರುಳಿಧರ್.ಆರ್, ಅವಿರೋದವಾಗಿ ಆಯ್ಕೆಯಾಗಲು ಸಹಾಕರಿಸಿದ ಎಲ್ಲ ಮುಖಂಡರಿಗೂ ಕೃತಜ್ಞನೆ ಸಲ್ಲಿಸುವೆ, ಅಧ್ಯಕ್ಷನಾಗಿ ನನ್ನ ಮುಖ್ಯ ಉದ್ದೇಶ ದೊಡ್ಡಬಳ್ಳಾಪುರ ಕೃಷಿಕ ಸಮಾಜಕ್ಕೆ ಕಟ್ಟಡ ನಿರ್ಮಾಣ ಮಾಡುವುದು, ಈ ಕುರಿತು ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಆಹಾರ ಸಚಿವ  ಕೆ.ಎಚ್.ಮುನಿಯಪ್ಪ ಬಳಿ ಮನವಿ ಮಾಡಲಾಗುವುದು. ಹಾಗೆಯೇ ಸರ್ಕಾರದಿಂದ ಸಿಗುವ ಸವಲತ್ತುಗಳನ್ನ ನೇರವಾಗಿ ರೈತರಿಗೆ ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಉಪಾಧ್ಯಕ್ಷರಾದ ಅರಸೇಗೌಡ.ಕೆ.ಎಚ್ ಮಾತನಾಡಿ, ಹಿರಿಯರ ಮಾರ್ಗದರ್ಶನಂತೆ ನಾನು ಕೆಲಸ ಮಾಡುತ್ತೇನೆ, ಅವರ ಹೆಸರಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಕೆಲಸ ಮಾಡುವೆ, ಸ್ವತಹ ನಾನು ರೈತನಾಗಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳು ಅರಿವು ನನಗೆ ಇರುವುದರಿಂದ ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ಮುಖಂಡರಾದ ರಂಗಪ್ಪ ಮಾತನಾಡಿ, ಕೆಲವು ದುಷ್ಟ ಶಕ್ತಿಗಳು ಕೃಷಿ ಸಮಾಜಕ್ಕೆ ಚುನಾವಣೆಯಾಗದಂತೆ ತಡೆದಿದ್ದರು, ಅದೀಗ ದೂರವಾಗಿದೆ. ಎಲ್ಲ ಪಕ್ಷದವರನ್ನು ಹೊಂದಾಣಿಕೆ ಮಾಡಿಕೊಂಡು ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪರಸ್ಪರ ಹೊಂದಾಣಿಕೆ ಮೂಲಕ ಅಧಿಕಾರವನ್ನ ಹಂಚಿಕೆ ಮಾಡಲಾಗಿದ್ದು, ಮುಂದಿನ ಅವಧಿಯಲ್ಲೂ ಅಧಿಕಾರ ಹಂಚಿಕೆ ಮಾಡಿಕೊಂಡು ರೈತರ ಪರವಾಗಿ ಕೆಲಸ ಮಾಡುವ ಕೆಲಸ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು, ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಜಾರಿಗೆ ಬರಲಿದ್ದು, ಅರ್ಹ ರೈತರನ್ನು ಗುರಿತಿಸಿ ಯೋಜನೆಯ ಲಾಭ ಸಿಗುವ ಪ್ರಮಾಣಿಕ ಕೆಲಸ ಮಾಡುವುದ್ದಾಗಿ ಹೇಳಿದರು.
ಅವಿರೋಧವಾಗಿ ಆಯ್ಕೆಯಾದ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀನಿವಾಸ, ಎ.ರವೀಂದ್ರ, ಪಿ.ನಾಗರಾಜು, ಮಂಜುನಾಥ್, ಎಂ.ಗೋಪಾಲರೆಡ್ಡಿ, ಜಿ.ಆರ್.ಅಶೋಕ್, ಆರ್.ಕೃಷ್ಣಮೂರ್ತಿ,ಟಿ.ವಿ.ರವಿಕುಮಾರ್, ಆರ್.ಜಯರಾಮಯ್ಯ, ಕೆ.ನರಸಿಂಹಯ್ಯರವರನ್ನು ಅಭಿನಂದಿಸಲಾಯಿತು.
ಈ ವೇಳೆ ಅಧ್ಯಕ್ಷ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಜಿಲ್ಲಾ ಪಂಚಾಯತಿ ಸದಸ್ಯ ಅರವಿಂದ್, ದೇವನಹಳ್ಳಿ ರವಿ ಕುಮಾರ್, ಕಾಂಗ್ರೆಸ್ ಮುಖಂಡ ರವಿ ಸಿದ್ದಪ್ಪ, ಭೂ ಮಂಜೂರಾತಿ ಸದಸ್ಯ ಶ್ರೀಧರ್.ಜಿ.ಕೆ ಗಂಗಸಂದ್ರ , ವಕೀಲರಾದ ಆರ್ ವಿ ಶಿವಕುಮಾರ್ ಸೇರಿದಂತೆ ತಾಲೂಕಿನ ಮುಖಂಡರು ಇದ್ದರು.
Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

6 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago