ತಾಲೂಕಿನ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್ ಅವಿರೋಧ ಆಯ್ಕೆ: ಗಣ್ಯರ ಅಭಿನಂದನೆ

ತಾಲೂಕಿನ ಕೃಷಿಕ ಸಮಾಜದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ್, ಖಜಾಂಚಿಯಾಗಿ ಎ.ಮುನಿಆಂಜಿನಪ್ಪ, ಜಿಲ್ಲಾ ಪ್ರತಿನಿಧಿಯಾಗಿ ಅಶೋಕ್.ಟಿ.ಎಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸದಸ್ಯಯರಿಗೆ ಗಣ್ಯರು ಪುಷ್ಪಮಾಲೆ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ಕೃಷಿ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಆಯ್ಕೆಯಾದವರನ್ನ ಹೊರತುಪಡಿಸಿ ಬೇರೆಯವರು ತಮ್ಮ ನಾಮಪತ್ರಗಳನ್ನ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ಸಹಾಯಕ ಕೃಷಿ ನಿರ್ದೇಶಕರು ಅವಿರೋಧ ಆಯ್ಕೆಯನ್ನ ಪ್ರಕಟಿಸಿದ್ದಾರೆ.
ಆಯ್ಕೆಯಾದವರ ಅವಧಿ 5 ವರ್ಷಗಳಾಗಿದ್ದು, 2029-30ನೇ ಸಾಲಿನಲ್ಲಿ ಇವರ ಅವಧಿ ಅಂತ್ಯವಾಗಲಿದೆ .
ಮಾಧ್ಯಮದೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಮುರುಳಿಧರ್.ಆರ್, ಅವಿರೋದವಾಗಿ ಆಯ್ಕೆಯಾಗಲು ಸಹಾಕರಿಸಿದ ಎಲ್ಲ ಮುಖಂಡರಿಗೂ ಕೃತಜ್ಞನೆ ಸಲ್ಲಿಸುವೆ, ಅಧ್ಯಕ್ಷನಾಗಿ ನನ್ನ ಮುಖ್ಯ ಉದ್ದೇಶ ದೊಡ್ಡಬಳ್ಳಾಪುರ ಕೃಷಿಕ ಸಮಾಜಕ್ಕೆ ಕಟ್ಟಡ ನಿರ್ಮಾಣ ಮಾಡುವುದು, ಈ ಕುರಿತು ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಆಹಾರ ಸಚಿವ  ಕೆ.ಎಚ್.ಮುನಿಯಪ್ಪ ಬಳಿ ಮನವಿ ಮಾಡಲಾಗುವುದು. ಹಾಗೆಯೇ ಸರ್ಕಾರದಿಂದ ಸಿಗುವ ಸವಲತ್ತುಗಳನ್ನ ನೇರವಾಗಿ ರೈತರಿಗೆ ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಉಪಾಧ್ಯಕ್ಷರಾದ ಅರಸೇಗೌಡ.ಕೆ.ಎಚ್ ಮಾತನಾಡಿ, ಹಿರಿಯರ ಮಾರ್ಗದರ್ಶನಂತೆ ನಾನು ಕೆಲಸ ಮಾಡುತ್ತೇನೆ, ಅವರ ಹೆಸರಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಕೆಲಸ ಮಾಡುವೆ, ಸ್ವತಹ ನಾನು ರೈತನಾಗಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳು ಅರಿವು ನನಗೆ ಇರುವುದರಿಂದ ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ಮುಖಂಡರಾದ ರಂಗಪ್ಪ ಮಾತನಾಡಿ, ಕೆಲವು ದುಷ್ಟ ಶಕ್ತಿಗಳು ಕೃಷಿ ಸಮಾಜಕ್ಕೆ ಚುನಾವಣೆಯಾಗದಂತೆ ತಡೆದಿದ್ದರು, ಅದೀಗ ದೂರವಾಗಿದೆ. ಎಲ್ಲ ಪಕ್ಷದವರನ್ನು ಹೊಂದಾಣಿಕೆ ಮಾಡಿಕೊಂಡು ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪರಸ್ಪರ ಹೊಂದಾಣಿಕೆ ಮೂಲಕ ಅಧಿಕಾರವನ್ನ ಹಂಚಿಕೆ ಮಾಡಲಾಗಿದ್ದು, ಮುಂದಿನ ಅವಧಿಯಲ್ಲೂ ಅಧಿಕಾರ ಹಂಚಿಕೆ ಮಾಡಿಕೊಂಡು ರೈತರ ಪರವಾಗಿ ಕೆಲಸ ಮಾಡುವ ಕೆಲಸ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು, ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಜಾರಿಗೆ ಬರಲಿದ್ದು, ಅರ್ಹ ರೈತರನ್ನು ಗುರಿತಿಸಿ ಯೋಜನೆಯ ಲಾಭ ಸಿಗುವ ಪ್ರಮಾಣಿಕ ಕೆಲಸ ಮಾಡುವುದ್ದಾಗಿ ಹೇಳಿದರು.
ಅವಿರೋಧವಾಗಿ ಆಯ್ಕೆಯಾದ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀನಿವಾಸ, ಎ.ರವೀಂದ್ರ, ಪಿ.ನಾಗರಾಜು, ಮಂಜುನಾಥ್, ಎಂ.ಗೋಪಾಲರೆಡ್ಡಿ, ಜಿ.ಆರ್.ಅಶೋಕ್, ಆರ್.ಕೃಷ್ಣಮೂರ್ತಿ,ಟಿ.ವಿ.ರವಿಕುಮಾರ್, ಆರ್.ಜಯರಾಮಯ್ಯ, ಕೆ.ನರಸಿಂಹಯ್ಯರವರನ್ನು ಅಭಿನಂದಿಸಲಾಯಿತು.
ಈ ವೇಳೆ ಅಧ್ಯಕ್ಷ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಜಿಲ್ಲಾ ಪಂಚಾಯತಿ ಸದಸ್ಯ ಅರವಿಂದ್, ದೇವನಹಳ್ಳಿ ರವಿ ಕುಮಾರ್, ಕಾಂಗ್ರೆಸ್ ಮುಖಂಡ ರವಿ ಸಿದ್ದಪ್ಪ, ಭೂ ಮಂಜೂರಾತಿ ಸದಸ್ಯ ಶ್ರೀಧರ್.ಜಿ.ಕೆ ಗಂಗಸಂದ್ರ , ವಕೀಲರಾದ ಆರ್ ವಿ ಶಿವಕುಮಾರ್ ಸೇರಿದಂತೆ ತಾಲೂಕಿನ ಮುಖಂಡರು ಇದ್ದರು.
Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

3 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

22 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago