ತಾಲೂಕಿನ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್ ಅವಿರೋಧ ಆಯ್ಕೆ: ಗಣ್ಯರ ಅಭಿನಂದನೆ

ತಾಲೂಕಿನ ಕೃಷಿಕ ಸಮಾಜದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ್, ಖಜಾಂಚಿಯಾಗಿ ಎ.ಮುನಿಆಂಜಿನಪ್ಪ, ಜಿಲ್ಲಾ ಪ್ರತಿನಿಧಿಯಾಗಿ ಅಶೋಕ್.ಟಿ.ಎಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸದಸ್ಯಯರಿಗೆ ಗಣ್ಯರು ಪುಷ್ಪಮಾಲೆ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ಕೃಷಿ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಆಯ್ಕೆಯಾದವರನ್ನ ಹೊರತುಪಡಿಸಿ ಬೇರೆಯವರು ತಮ್ಮ ನಾಮಪತ್ರಗಳನ್ನ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ಸಹಾಯಕ ಕೃಷಿ ನಿರ್ದೇಶಕರು ಅವಿರೋಧ ಆಯ್ಕೆಯನ್ನ ಪ್ರಕಟಿಸಿದ್ದಾರೆ.
ಆಯ್ಕೆಯಾದವರ ಅವಧಿ 5 ವರ್ಷಗಳಾಗಿದ್ದು, 2029-30ನೇ ಸಾಲಿನಲ್ಲಿ ಇವರ ಅವಧಿ ಅಂತ್ಯವಾಗಲಿದೆ .
ಮಾಧ್ಯಮದೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಮುರುಳಿಧರ್.ಆರ್, ಅವಿರೋದವಾಗಿ ಆಯ್ಕೆಯಾಗಲು ಸಹಾಕರಿಸಿದ ಎಲ್ಲ ಮುಖಂಡರಿಗೂ ಕೃತಜ್ಞನೆ ಸಲ್ಲಿಸುವೆ, ಅಧ್ಯಕ್ಷನಾಗಿ ನನ್ನ ಮುಖ್ಯ ಉದ್ದೇಶ ದೊಡ್ಡಬಳ್ಳಾಪುರ ಕೃಷಿಕ ಸಮಾಜಕ್ಕೆ ಕಟ್ಟಡ ನಿರ್ಮಾಣ ಮಾಡುವುದು, ಈ ಕುರಿತು ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಆಹಾರ ಸಚಿವ  ಕೆ.ಎಚ್.ಮುನಿಯಪ್ಪ ಬಳಿ ಮನವಿ ಮಾಡಲಾಗುವುದು. ಹಾಗೆಯೇ ಸರ್ಕಾರದಿಂದ ಸಿಗುವ ಸವಲತ್ತುಗಳನ್ನ ನೇರವಾಗಿ ರೈತರಿಗೆ ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಉಪಾಧ್ಯಕ್ಷರಾದ ಅರಸೇಗೌಡ.ಕೆ.ಎಚ್ ಮಾತನಾಡಿ, ಹಿರಿಯರ ಮಾರ್ಗದರ್ಶನಂತೆ ನಾನು ಕೆಲಸ ಮಾಡುತ್ತೇನೆ, ಅವರ ಹೆಸರಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಕೆಲಸ ಮಾಡುವೆ, ಸ್ವತಹ ನಾನು ರೈತನಾಗಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳು ಅರಿವು ನನಗೆ ಇರುವುದರಿಂದ ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ಮುಖಂಡರಾದ ರಂಗಪ್ಪ ಮಾತನಾಡಿ, ಕೆಲವು ದುಷ್ಟ ಶಕ್ತಿಗಳು ಕೃಷಿ ಸಮಾಜಕ್ಕೆ ಚುನಾವಣೆಯಾಗದಂತೆ ತಡೆದಿದ್ದರು, ಅದೀಗ ದೂರವಾಗಿದೆ. ಎಲ್ಲ ಪಕ್ಷದವರನ್ನು ಹೊಂದಾಣಿಕೆ ಮಾಡಿಕೊಂಡು ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪರಸ್ಪರ ಹೊಂದಾಣಿಕೆ ಮೂಲಕ ಅಧಿಕಾರವನ್ನ ಹಂಚಿಕೆ ಮಾಡಲಾಗಿದ್ದು, ಮುಂದಿನ ಅವಧಿಯಲ್ಲೂ ಅಧಿಕಾರ ಹಂಚಿಕೆ ಮಾಡಿಕೊಂಡು ರೈತರ ಪರವಾಗಿ ಕೆಲಸ ಮಾಡುವ ಕೆಲಸ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು, ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಜಾರಿಗೆ ಬರಲಿದ್ದು, ಅರ್ಹ ರೈತರನ್ನು ಗುರಿತಿಸಿ ಯೋಜನೆಯ ಲಾಭ ಸಿಗುವ ಪ್ರಮಾಣಿಕ ಕೆಲಸ ಮಾಡುವುದ್ದಾಗಿ ಹೇಳಿದರು.
ಅವಿರೋಧವಾಗಿ ಆಯ್ಕೆಯಾದ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀನಿವಾಸ, ಎ.ರವೀಂದ್ರ, ಪಿ.ನಾಗರಾಜು, ಮಂಜುನಾಥ್, ಎಂ.ಗೋಪಾಲರೆಡ್ಡಿ, ಜಿ.ಆರ್.ಅಶೋಕ್, ಆರ್.ಕೃಷ್ಣಮೂರ್ತಿ,ಟಿ.ವಿ.ರವಿಕುಮಾರ್, ಆರ್.ಜಯರಾಮಯ್ಯ, ಕೆ.ನರಸಿಂಹಯ್ಯರವರನ್ನು ಅಭಿನಂದಿಸಲಾಯಿತು.
ಈ ವೇಳೆ ಅಧ್ಯಕ್ಷ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಜಿಲ್ಲಾ ಪಂಚಾಯತಿ ಸದಸ್ಯ ಅರವಿಂದ್, ದೇವನಹಳ್ಳಿ ರವಿ ಕುಮಾರ್, ಕಾಂಗ್ರೆಸ್ ಮುಖಂಡ ರವಿ ಸಿದ್ದಪ್ಪ, ಭೂ ಮಂಜೂರಾತಿ ಸದಸ್ಯ ಶ್ರೀಧರ್.ಜಿ.ಕೆ ಗಂಗಸಂದ್ರ , ವಕೀಲರಾದ ಆರ್ ವಿ ಶಿವಕುಮಾರ್ ಸೇರಿದಂತೆ ತಾಲೂಕಿನ ಮುಖಂಡರು ಇದ್ದರು.
Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

12 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago