ತಾಲೂಕಿನ ಜನತೆಗೆ ಶುದ್ಧ ಕುಡಿಯುವ ನೀರು ನೀಡುವುದಕ್ಕೆ ಮೊದಲ ಆದ್ಯತೆ ನೀಡಬೇಕು, ಜನರು ಆರೋಗ್ಯಕರ ಜೀವನ ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.
ತಾಲೂಕು ಪಂಚಾಯಿತಿ ಕಚೇರಿಯಲ್ಲಿಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಖಾಸಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗಿಂತ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳು ತೆಗೆಯುವಂತೆ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು. ಇದಕ್ಕೆ ಬೇಕಾದಂತಹ ಸಹಕಾರ ನೀಡಲಾಗುವುದು ಎಂದರು.
ನೇಕಾರ ಸಮ್ಮಾನ್ ಯೋಜನೆಯಡಿ 5847 ಘಟಕಗಳಿಂದ 14080 ನೇಕಾರರಿಗೆ 5 ಸಾವಿರ ರೂ.ಗಳ ಸಹಾಯಧನ ನೀಡಲು ನೋಂದಣಿ ಪ್ರಕ್ರಿಯೆ ನಡೆದಿದೆ. ಈ ಯೋಜನೆಯಲ್ಲಿ ಸ್ಥಳೀಯ ನೇಕಾರರಿಗೆ ಮಾತ್ರ ಅವಕಾಶವಿದ್ದು, ಹೊರ ರಾಜ್ಯದ ನೇಕಾರರಿಗೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದು ಜವಳಿ ಇಲಾಖೆಯ ಅಕಾರಿಗಳು ಮಾಹಿತಿ ನೀಡಿದರು.
ನಗರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ 30 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, 15.30 ಕೋಟಿ ರೂ. ಕಾಮಗಾರಿಗಳು ಬಾಕಿ ಇದೆ. 3 ಕೋಟಿ ರೂ. ಕೆಲಸ ಆಗಿದೆ. ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದ್ದು, ಗುತ್ತಿಗೆದಾರರು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಕೆಲಸ ಮಾಡದ ಗುತ್ತಿಗೆದಾರರಿಗೆ ನೋಟಿಸ್ ನೀಡಲಾಗಿದೆ ಎಂದು ನಗರಸಭೆ ಎಇಇ ರಾಮೇಗೌಡ ಹೇಳಿದರು.
ನಗರೋತ್ಥಾನ ಯೋಜನೆಯ ಅನುದಾನ ವಿಳಂಬಕ್ಕಾಗಿ ಜಿಲ್ಲಾಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಎಸ್ಇಪಿ, ಟಿಎಸ್ಪಿಗೆ ಅನುದಾನ ಬಳಕೆಯಾಗಬೇಕು. ಕಾಮಗಾರಿಗಳನ್ನು ವಿಳಂಬ ಮಾಡಬೇಡಿ ಎಂದು ಶಾಸಕರು ಸೂಚಿಸಿದರು.
ಮದ್ಯಮುಕ್ತ ಗ್ರಾಮ ಮಾಡಿ
ತಾಲೂಕಿನ ಹಳೇಕೋಟೆ ಸೇರಿದಂತೆ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಅಬಕಾರಿ ಇಲಾಖೆ ಈ ಬಗ್ಗೆ ಕ್ರಮ ವಹಿಸಬೇಕು. ಮದ್ಯ ಮಾರಾಟ, ಅಬಕಾರಿ ನಿಯಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಪ್ರತಿ ತಿಂಗಳಲ್ಲಿ 1ನೇ ಹಾಗು 3ನೇ ಶನಿವಾರದಂದು ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಜಾಗೃತಿ ಮೂಡಿಸಿ. ಮದ್ಯ ಮುಕ್ತ ಗ್ರಾಮವನ್ನು ಮಾಡಲು ಸಹಕರಿಸಬೇಕು. ಆಯೋಗ್ಯ ಇಲಾಖೆಯ ಆಶಾ ಕಾರ್ಯಕರ್ತರು ಸಹ ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.
ಹಣ ಉಳಿಸಲು ಅವೈಜ್ಞಾನಿಕ ರಸ್ತೆ ಕಾಮಗಾರಿ
ತಾಲೂಕಿನಲ್ಲಿ ಇತ್ತೀಚೆಗೆ ಸಾಕಷ್ಟು ರಸ್ತೆ ಅಪಘಾತಗಳು ಸಂಭವಿಸಿ ಅನೇಕ ಸಾವು-ನೋವುಗಳು ಸಂಭವಿಸುತ್ತಿದ್ದು, ಈ ಕುರಿತು ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಮೊದಲು ನಾವೆಲ್ಲರೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ಹೆದ್ದಾರಿಗಳಲ್ಲಿ ಕೆಲವೊಂದು ಕಡೆ ಸೂಕ್ತ ತಿರುವುಗಳು ಇಲ್ಲ, ಅನುದಾನ ಉಳಿಸಲು ತಗ್ಗು, ಎತ್ತರ ಪ್ರದೇಶಗಳಲ್ಲಿ ಮಾತ್ರ ಫ್ಲೈ ಓವರ್, ಅಂಡರ್ ಪಾಸ್ ನಿರ್ಮಿಸಲಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂದರು.
ರಸ್ತೆ ಕಾಮಗಾರಿ ಸಂದರ್ಭದಲ್ಲಿ ಎಲ್ಲಿ ಊರು ಇದೆ, ಎಲ್ಲಿ ಜನ, ಜಾನುವಾರುಗಳು ಓಡಾಡುತ್ತವೆ, ಎಲ್ಲಿ ರಾಜಕಾಲುವೆ ಹಾದು ಹೋಗುತ್ತದೆ ಅಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅದನ್ನ ಬಿಟ್ಟು ಬೇರೆ ಎಲ್ಲೋ ಏನೋ ಕ್ರಮಗಳನ್ನು ಕೈಗೊಂಡರೆ ಹೇಗೆ. ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯವಿರುವ ಕಡೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು ಎಂದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…