ತಾಲೂಕಿನ ಜನತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸಿ- ಶಾಸಕ ಧೀರಜ್ ಮುನಿರಾಜ್

ತಾಲೂಕಿನ ಜನತೆಗೆ ಶುದ್ಧ ಕುಡಿಯುವ ನೀರು ನೀಡುವುದಕ್ಕೆ ಮೊದಲ ಆದ್ಯತೆ ನೀಡಬೇಕು, ಜನರು ಆರೋಗ್ಯಕರ ಜೀವನ ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಖಾಸಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗಿಂತ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳು ತೆಗೆಯುವಂತೆ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು. ಇದಕ್ಕೆ ಬೇಕಾದಂತಹ ಸಹಕಾರ ನೀಡಲಾಗುವುದು ಎಂದರು.

ನೇಕಾರ ಸಮ್ಮಾನ್ ಯೋಜನೆಯಡಿ 5847 ಘಟಕಗಳಿಂದ 14080 ನೇಕಾರರಿಗೆ 5 ಸಾವಿರ ರೂ.ಗಳ ಸಹಾಯಧನ ನೀಡಲು ನೋಂದಣಿ ಪ್ರಕ್ರಿಯೆ ನಡೆದಿದೆ. ಈ ಯೋಜನೆಯಲ್ಲಿ ಸ್ಥಳೀಯ ನೇಕಾರರಿಗೆ ಮಾತ್ರ ಅವಕಾಶವಿದ್ದು, ಹೊರ ರಾಜ್ಯದ ನೇಕಾರರಿಗೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದು ಜವಳಿ ಇಲಾಖೆಯ ಅಕಾರಿಗಳು ಮಾಹಿತಿ ನೀಡಿದರು.

ನಗರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ 30 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, 15.30 ಕೋಟಿ ರೂ. ಕಾಮಗಾರಿಗಳು ಬಾಕಿ ಇದೆ. 3 ಕೋಟಿ ರೂ. ಕೆಲಸ ಆಗಿದೆ. ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದ್ದು, ಗುತ್ತಿಗೆದಾರರು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಕೆಲಸ ಮಾಡದ ಗುತ್ತಿಗೆದಾರರಿಗೆ ನೋಟಿಸ್ ನೀಡಲಾಗಿದೆ ಎಂದು ನಗರಸಭೆ ಎಇಇ  ರಾಮೇಗೌಡ ಹೇಳಿದರು.

ನಗರೋತ್ಥಾನ ಯೋಜನೆಯ ಅನುದಾನ ವಿಳಂಬಕ್ಕಾಗಿ ಜಿಲ್ಲಾಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಎಸ್‍ಇಪಿ, ಟಿಎಸ್‍ಪಿಗೆ ಅನುದಾನ ಬಳಕೆಯಾಗಬೇಕು. ಕಾಮಗಾರಿಗಳನ್ನು ವಿಳಂಬ ಮಾಡಬೇಡಿ ಎಂದು ಶಾಸಕರು ಸೂಚಿಸಿದರು.

ಮದ್ಯಮುಕ್ತ ಗ್ರಾಮ ಮಾಡಿ

ತಾಲೂಕಿನ ಹಳೇಕೋಟೆ ಸೇರಿದಂತೆ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಅಬಕಾರಿ ಇಲಾಖೆ ಈ ಬಗ್ಗೆ ಕ್ರಮ ವಹಿಸಬೇಕು. ಮದ್ಯ ಮಾರಾಟ, ಅಬಕಾರಿ ನಿಯಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಪ್ರತಿ ತಿಂಗಳಲ್ಲಿ 1ನೇ ಹಾಗು 3ನೇ ಶನಿವಾರದಂದು ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಜಾಗೃತಿ ಮೂಡಿಸಿ. ಮದ್ಯ ಮುಕ್ತ ಗ್ರಾಮವನ್ನು ಮಾಡಲು ಸಹಕರಿಸಬೇಕು. ಆಯೋಗ್ಯ ಇಲಾಖೆಯ ಆಶಾ ಕಾರ್ಯಕರ್ತರು ಸಹ ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.

ಹಣ ಉಳಿಸಲು ಅವೈಜ್ಞಾನಿಕ ರಸ್ತೆ ಕಾಮಗಾರಿ

ತಾಲೂಕಿನಲ್ಲಿ ಇತ್ತೀಚೆಗೆ ಸಾಕಷ್ಟು ರಸ್ತೆ ಅಪಘಾತಗಳು ಸಂಭವಿಸಿ ಅನೇಕ ಸಾವು-ನೋವುಗಳು ಸಂಭವಿಸುತ್ತಿದ್ದು, ಈ ಕುರಿತು ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಮೊದಲು ನಾವೆಲ್ಲರೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ಹೆದ್ದಾರಿಗಳಲ್ಲಿ ಕೆಲವೊಂದು‌ ಕಡೆ ಸೂಕ್ತ ತಿರುವುಗಳು ಇಲ್ಲ, ಅನುದಾನ ಉಳಿಸಲು ತಗ್ಗು, ಎತ್ತರ ಪ್ರದೇಶಗಳಲ್ಲಿ ಮಾತ್ರ ಫ್ಲೈ ಓವರ್, ಅಂಡರ್  ಪಾಸ್ ನಿರ್ಮಿಸಲಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂದರು.

ರಸ್ತೆ ಕಾಮಗಾರಿ ಸಂದರ್ಭದಲ್ಲಿ ಎಲ್ಲಿ ಊರು‌ ಇದೆ, ಎಲ್ಲಿ ಜನ, ಜಾನುವಾರುಗಳು ಓಡಾಡುತ್ತವೆ, ಎಲ್ಲಿ ರಾಜಕಾಲುವೆ ಹಾದು ಹೋಗುತ್ತದೆ ಅಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅದನ್ನ ಬಿಟ್ಟು ಬೇರೆ ಎಲ್ಲೋ ಏನೋ ಕ್ರಮಗಳನ್ನು ಕೈಗೊಂಡರೆ ಹೇಗೆ. ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯವಿರುವ ಕಡೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು ಎಂದರು.

Ramesh Babu

Journalist

Recent Posts

‘ಡೇ ಕೇರ್’ ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……?

ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…

57 seconds ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

13 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

13 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

13 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

18 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

1 day ago