ತಾಲೂಕಿನ ಟಿ. ಹೊಸಹಳ್ಳಿಯಲ್ಲಿ ಕೆಂಪೇಗೌಡ ಜಯಂತೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಡಾ. ಕೆ ಸುಧಾಕರ್, ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಮಾತ್ರ ಅಜರಾಮರವಾಗಿದ್ದಾರೆ. ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ. ಕೆಂಪೇಗೌಡರು ದಕ್ಷ ಮತ್ತು ದೂರದೃಷ್ಟಿಯಳ್ಳ ಆಡಳಿತಗಾರನಾಗಿದ್ದರು. ಇದರ ಫಲವಾಗಿ ಇಂದು ಬೆಂಗಳೂರು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಮಹನೀಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಪ್ಪಯ್ಯಣ್ಣ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಸಾಧನೆ ಇಂದಿನ ಯುವ ಪೀಳಿಗೆಗೆ ಆದರ್ಶವಾಗಲಿ. ಅವರ ಅನನ್ಯ ಸಾಧನೆಯ ಫಲವಾಗಿ ಇಂದು ಸಾವಿರಾರು ಜನ ಬೆಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಬಣ್ಣಿಸಿದರು.

ಇದಕ್ಕೂ ಮೊದಲು ಟಿ.ಹೊಸಹಳ್ಳಿ ಗ್ರಾಮಕ್ಕೆ ಪ್ರಪ್ರಥಮವಾಗಿ ಆಗಮಿಸಿದ ಸಂಸದ ಡಾ ಕೆ ಸುಧಾಕರ್ ರವರಿಗೆ ಊರಿನ ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭದೊಂದಿಗೆ ಭರ್ಜರಿ ಸ್ವಾಗತ ಕೋರಿದರು‌. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಸದರೊಡನೆ ಫೋಟೋ ಕ್ಲಿಕ್ಕಿಸಿಕೊಂಡು ಆನಂದ ಪಟ್ಟರು.

ಕಾರ್ಯಕ್ರಮದಲ್ಲಿ ರಾಜ್ಯ ತೆಂಗು ನಾರಿನ ಮಹಾಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕುರುವಿಗೆರೆ ನರಸಿಂಹಯ್ಯ, ಬಮೂಲ್ ನಿರ್ದೇಶಕ ಆನಂದ್, ವಕೀಲ ಪ್ರತಾಪ್, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಪುರುಷೋತ್ತಮ್, ಯುವ ಮುಖಂಡ ಉದಯ ಆರಾಧ್ಯ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ರೈತ ಮುಖಂಡ ವಾಸು, ಮುರುಳಿ, ಕೆಂಪೇಗೌಡ ಆಚರಣೆ ಸಮಿತಿಯ ಪದಾಧಿಕಾರಿಗಳಾದ ಆರ್.ಜಿ.ಪಿ.ಎನ್ ಗಂಗಾಧರ್, ಚನ್ನೇಗೌಡ, ಕುಮಾರ್, ಚಂದ್ರಪ್ಪ, ಚನ್ನಕೇಶವ, ಚಂದ್ರು, ಗೌಡ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

57 minutes ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

4 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

5 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

16 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago