ತಾಲೂಕಿನ ಟಿ. ಹೊಸಹಳ್ಳಿಯಲ್ಲಿ ಕೆಂಪೇಗೌಡ ಜಯಂತೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಡಾ. ಕೆ ಸುಧಾಕರ್, ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಮಾತ್ರ ಅಜರಾಮರವಾಗಿದ್ದಾರೆ. ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ. ಕೆಂಪೇಗೌಡರು ದಕ್ಷ ಮತ್ತು ದೂರದೃಷ್ಟಿಯಳ್ಳ ಆಡಳಿತಗಾರನಾಗಿದ್ದರು. ಇದರ ಫಲವಾಗಿ ಇಂದು ಬೆಂಗಳೂರು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಮಹನೀಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಪ್ಪಯ್ಯಣ್ಣ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಸಾಧನೆ ಇಂದಿನ ಯುವ ಪೀಳಿಗೆಗೆ ಆದರ್ಶವಾಗಲಿ. ಅವರ ಅನನ್ಯ ಸಾಧನೆಯ ಫಲವಾಗಿ ಇಂದು ಸಾವಿರಾರು ಜನ ಬೆಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಬಣ್ಣಿಸಿದರು.

ಇದಕ್ಕೂ ಮೊದಲು ಟಿ.ಹೊಸಹಳ್ಳಿ ಗ್ರಾಮಕ್ಕೆ ಪ್ರಪ್ರಥಮವಾಗಿ ಆಗಮಿಸಿದ ಸಂಸದ ಡಾ ಕೆ ಸುಧಾಕರ್ ರವರಿಗೆ ಊರಿನ ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭದೊಂದಿಗೆ ಭರ್ಜರಿ ಸ್ವಾಗತ ಕೋರಿದರು‌. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಸದರೊಡನೆ ಫೋಟೋ ಕ್ಲಿಕ್ಕಿಸಿಕೊಂಡು ಆನಂದ ಪಟ್ಟರು.

ಕಾರ್ಯಕ್ರಮದಲ್ಲಿ ರಾಜ್ಯ ತೆಂಗು ನಾರಿನ ಮಹಾಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕುರುವಿಗೆರೆ ನರಸಿಂಹಯ್ಯ, ಬಮೂಲ್ ನಿರ್ದೇಶಕ ಆನಂದ್, ವಕೀಲ ಪ್ರತಾಪ್, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಪುರುಷೋತ್ತಮ್, ಯುವ ಮುಖಂಡ ಉದಯ ಆರಾಧ್ಯ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ರೈತ ಮುಖಂಡ ವಾಸು, ಮುರುಳಿ, ಕೆಂಪೇಗೌಡ ಆಚರಣೆ ಸಮಿತಿಯ ಪದಾಧಿಕಾರಿಗಳಾದ ಆರ್.ಜಿ.ಪಿ.ಎನ್ ಗಂಗಾಧರ್, ಚನ್ನೇಗೌಡ, ಕುಮಾರ್, ಚಂದ್ರಪ್ಪ, ಚನ್ನಕೇಶವ, ಚಂದ್ರು, ಗೌಡ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

2 days ago