ತಾಲೂಕಿನ ಟಿ. ಹೊಸಹಳ್ಳಿಯಲ್ಲಿ ಕೆಂಪೇಗೌಡ ಜಯಂತೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಡಾ. ಕೆ ಸುಧಾಕರ್, ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಮಾತ್ರ ಅಜರಾಮರವಾಗಿದ್ದಾರೆ. ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ. ಕೆಂಪೇಗೌಡರು ದಕ್ಷ ಮತ್ತು ದೂರದೃಷ್ಟಿಯಳ್ಳ ಆಡಳಿತಗಾರನಾಗಿದ್ದರು. ಇದರ ಫಲವಾಗಿ ಇಂದು ಬೆಂಗಳೂರು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಮಹನೀಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಪ್ಪಯ್ಯಣ್ಣ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಸಾಧನೆ ಇಂದಿನ ಯುವ ಪೀಳಿಗೆಗೆ ಆದರ್ಶವಾಗಲಿ. ಅವರ ಅನನ್ಯ ಸಾಧನೆಯ ಫಲವಾಗಿ ಇಂದು ಸಾವಿರಾರು ಜನ ಬೆಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಬಣ್ಣಿಸಿದರು.

ಇದಕ್ಕೂ ಮೊದಲು ಟಿ.ಹೊಸಹಳ್ಳಿ ಗ್ರಾಮಕ್ಕೆ ಪ್ರಪ್ರಥಮವಾಗಿ ಆಗಮಿಸಿದ ಸಂಸದ ಡಾ ಕೆ ಸುಧಾಕರ್ ರವರಿಗೆ ಊರಿನ ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭದೊಂದಿಗೆ ಭರ್ಜರಿ ಸ್ವಾಗತ ಕೋರಿದರು‌. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಸದರೊಡನೆ ಫೋಟೋ ಕ್ಲಿಕ್ಕಿಸಿಕೊಂಡು ಆನಂದ ಪಟ್ಟರು.

ಕಾರ್ಯಕ್ರಮದಲ್ಲಿ ರಾಜ್ಯ ತೆಂಗು ನಾರಿನ ಮಹಾಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕುರುವಿಗೆರೆ ನರಸಿಂಹಯ್ಯ, ಬಮೂಲ್ ನಿರ್ದೇಶಕ ಆನಂದ್, ವಕೀಲ ಪ್ರತಾಪ್, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಪುರುಷೋತ್ತಮ್, ಯುವ ಮುಖಂಡ ಉದಯ ಆರಾಧ್ಯ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ರೈತ ಮುಖಂಡ ವಾಸು, ಮುರುಳಿ, ಕೆಂಪೇಗೌಡ ಆಚರಣೆ ಸಮಿತಿಯ ಪದಾಧಿಕಾರಿಗಳಾದ ಆರ್.ಜಿ.ಪಿ.ಎನ್ ಗಂಗಾಧರ್, ಚನ್ನೇಗೌಡ, ಕುಮಾರ್, ಚಂದ್ರಪ್ಪ, ಚನ್ನಕೇಶವ, ಚಂದ್ರು, ಗೌಡ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

11 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

15 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago