ತಾಲೂಕಿನ ಟಿ. ಹೊಸಹಳ್ಳಿಯಲ್ಲಿ ಕೆಂಪೇಗೌಡ ಜಯಂತೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಡಾ. ಕೆ ಸುಧಾಕರ್, ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಮಾತ್ರ ಅಜರಾಮರವಾಗಿದ್ದಾರೆ. ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ. ಕೆಂಪೇಗೌಡರು ದಕ್ಷ ಮತ್ತು ದೂರದೃಷ್ಟಿಯಳ್ಳ ಆಡಳಿತಗಾರನಾಗಿದ್ದರು. ಇದರ ಫಲವಾಗಿ ಇಂದು ಬೆಂಗಳೂರು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಮಹನೀಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಪ್ಪಯ್ಯಣ್ಣ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಸಾಧನೆ ಇಂದಿನ ಯುವ ಪೀಳಿಗೆಗೆ ಆದರ್ಶವಾಗಲಿ. ಅವರ ಅನನ್ಯ ಸಾಧನೆಯ ಫಲವಾಗಿ ಇಂದು ಸಾವಿರಾರು ಜನ ಬೆಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಬಣ್ಣಿಸಿದರು.

ಇದಕ್ಕೂ ಮೊದಲು ಟಿ.ಹೊಸಹಳ್ಳಿ ಗ್ರಾಮಕ್ಕೆ ಪ್ರಪ್ರಥಮವಾಗಿ ಆಗಮಿಸಿದ ಸಂಸದ ಡಾ ಕೆ ಸುಧಾಕರ್ ರವರಿಗೆ ಊರಿನ ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭದೊಂದಿಗೆ ಭರ್ಜರಿ ಸ್ವಾಗತ ಕೋರಿದರು‌. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಸದರೊಡನೆ ಫೋಟೋ ಕ್ಲಿಕ್ಕಿಸಿಕೊಂಡು ಆನಂದ ಪಟ್ಟರು.

ಕಾರ್ಯಕ್ರಮದಲ್ಲಿ ರಾಜ್ಯ ತೆಂಗು ನಾರಿನ ಮಹಾಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕುರುವಿಗೆರೆ ನರಸಿಂಹಯ್ಯ, ಬಮೂಲ್ ನಿರ್ದೇಶಕ ಆನಂದ್, ವಕೀಲ ಪ್ರತಾಪ್, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಪುರುಷೋತ್ತಮ್, ಯುವ ಮುಖಂಡ ಉದಯ ಆರಾಧ್ಯ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ರೈತ ಮುಖಂಡ ವಾಸು, ಮುರುಳಿ, ಕೆಂಪೇಗೌಡ ಆಚರಣೆ ಸಮಿತಿಯ ಪದಾಧಿಕಾರಿಗಳಾದ ಆರ್.ಜಿ.ಪಿ.ಎನ್ ಗಂಗಾಧರ್, ಚನ್ನೇಗೌಡ, ಕುಮಾರ್, ಚಂದ್ರಪ್ಪ, ಚನ್ನಕೇಶವ, ಚಂದ್ರು, ಗೌಡ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

39 minutes ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

3 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

6 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

21 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago