ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಡಾ. ಕೆ ಸುಧಾಕರ್, ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಮಾತ್ರ ಅಜರಾಮರವಾಗಿದ್ದಾರೆ. ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ. ಕೆಂಪೇಗೌಡರು ದಕ್ಷ ಮತ್ತು ದೂರದೃಷ್ಟಿಯಳ್ಳ ಆಡಳಿತಗಾರನಾಗಿದ್ದರು. ಇದರ ಫಲವಾಗಿ ಇಂದು ಬೆಂಗಳೂರು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಮಹನೀಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದಕ್ಕೂ ಮೊದಲು ಟಿ.ಹೊಸಹಳ್ಳಿ ಗ್ರಾಮಕ್ಕೆ ಪ್ರಪ್ರಥಮವಾಗಿ ಆಗಮಿಸಿದ ಸಂಸದ ಡಾ ಕೆ ಸುಧಾಕರ್ ರವರಿಗೆ ಊರಿನ ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭದೊಂದಿಗೆ ಭರ್ಜರಿ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಸದರೊಡನೆ ಫೋಟೋ ಕ್ಲಿಕ್ಕಿಸಿಕೊಂಡು ಆನಂದ ಪಟ್ಟರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…