ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಡಾ. ಕೆ ಸುಧಾಕರ್, ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಮಾತ್ರ ಅಜರಾಮರವಾಗಿದ್ದಾರೆ. ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ. ಕೆಂಪೇಗೌಡರು ದಕ್ಷ ಮತ್ತು ದೂರದೃಷ್ಟಿಯಳ್ಳ ಆಡಳಿತಗಾರನಾಗಿದ್ದರು. ಇದರ ಫಲವಾಗಿ ಇಂದು ಬೆಂಗಳೂರು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಮಹನೀಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದಕ್ಕೂ ಮೊದಲು ಟಿ.ಹೊಸಹಳ್ಳಿ ಗ್ರಾಮಕ್ಕೆ ಪ್ರಪ್ರಥಮವಾಗಿ ಆಗಮಿಸಿದ ಸಂಸದ ಡಾ ಕೆ ಸುಧಾಕರ್ ರವರಿಗೆ ಊರಿನ ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭದೊಂದಿಗೆ ಭರ್ಜರಿ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಸದರೊಡನೆ ಫೋಟೋ ಕ್ಲಿಕ್ಕಿಸಿಕೊಂಡು ಆನಂದ ಪಟ್ಟರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…