ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಡಾ. ಕೆ ಸುಧಾಕರ್, ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಮಾತ್ರ ಅಜರಾಮರವಾಗಿದ್ದಾರೆ. ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ. ಕೆಂಪೇಗೌಡರು ದಕ್ಷ ಮತ್ತು ದೂರದೃಷ್ಟಿಯಳ್ಳ ಆಡಳಿತಗಾರನಾಗಿದ್ದರು. ಇದರ ಫಲವಾಗಿ ಇಂದು ಬೆಂಗಳೂರು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಮಹನೀಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದಕ್ಕೂ ಮೊದಲು ಟಿ.ಹೊಸಹಳ್ಳಿ ಗ್ರಾಮಕ್ಕೆ ಪ್ರಪ್ರಥಮವಾಗಿ ಆಗಮಿಸಿದ ಸಂಸದ ಡಾ ಕೆ ಸುಧಾಕರ್ ರವರಿಗೆ ಊರಿನ ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭದೊಂದಿಗೆ ಭರ್ಜರಿ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಸದರೊಡನೆ ಫೋಟೋ ಕ್ಲಿಕ್ಕಿಸಿಕೊಂಡು ಆನಂದ ಪಟ್ಟರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…