ತಾಲೂಕಿನ ತೂಬಗೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾದ ವೈ.ಎನ್.ನವೀನ್ ಕುಮಾರ್

ತಾಲೂಕಿನ ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೇವಲ ನವೀನ್ ಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ನಿಗದಿತ ಅವಧಿಯೊಳಗೆ ಉಳಿದ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ನವೀನ್ ಕುಮಾರ್ ಅವರ ಆಯ್ಕೆಯನ್ನು ರೇಷ್ಮೆ ಸಹಾಯಕ‌ ನಿರ್ದೇಶಕರು ಹಾಗೂ ಚುನಾವಣಾಧಿಕಾರಿ ಎನ್.ಗಿರಿಜಾಂಬ ಅವರು, ಅವಿರೋಧ ಆಯ್ಕೆ ಪ್ರಕಟಿಸಿದರು.

ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 21 ಮಂದಿ ಸದಸ್ಯರಿದ್ದು, ಎಲ್ಲರೂ ಸರ್ವಾನುಮತದಿಂದ ನವೀನ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.

ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ‌ ನಾಲ್ವರು, ಬಿಜೆಪಿ ಬೆಂಬಲಿತ 12 ಮಂದಿ, ಜೆಡಿಎಸ್ ಬೆಂಬಲಿತ ಮೂವರು ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಈ ಪೈಕಿ 10 ಮಂದಿ‌ ಮಹಿಳಾ ಸದಸ್ಯರೇ ಇದ್ದಾರೆ.

ನೂತನ ಅಧ್ಯಕ್ಷ ವೈ.ಎನ್.ನವೀನ್ ಕುಮಾರ್ ಮಾತನಾಡಿ, ಎಲ್ಲ ಸದಸ್ಯರು ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ‌ ಆಯ್ಕೆ‌ ಮಾಡಿದ್ದಾರೆ. ಎಲ್ಲರ ಆಶಯದಂತೆ ಹಾಗೂ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ಸರ್ವಾಂಗೀಣ‌ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ‌‌ ಶಾಸಕ ವೆಂಕಟಸ್ವಾಮಿ, ಬಿಜೆಪಿ‌ ಮುಖಂಡ ಅರವಿಂದ, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು, ಶೆಟ್ಟಿಗೆರೆ ರಾಜಣ್ಣ, ಶಾಂತಕುಮಾರ್, ಚಂದ್ರಣ್ಣ, ಸತ್ಯನಾರಾಯಣಪ್ಪ, ವೆಂಕಟೇಗೌಡ, ವೆಂಕಟೇಶ್, ಮುನಿಕೃಷ್ಣಪ್ಪ, ಕೃಷ್ಣಪ್ಪ, ನಾಗಮ್ಮ ಇತರರು ನೂತನ ಅಧ್ಯಕ್ಷ ನವೀನ್ ಕುಮಾರ್ ಅವರನ್ನು ಅಭಿನಂದಿಸಿದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

11 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago