ತಾಲೂಕಿನ ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೇವಲ ನವೀನ್ ಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ನಿಗದಿತ ಅವಧಿಯೊಳಗೆ ಉಳಿದ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ನವೀನ್ ಕುಮಾರ್ ಅವರ ಆಯ್ಕೆಯನ್ನು ರೇಷ್ಮೆ ಸಹಾಯಕ ನಿರ್ದೇಶಕರು ಹಾಗೂ ಚುನಾವಣಾಧಿಕಾರಿ ಎನ್.ಗಿರಿಜಾಂಬ ಅವರು, ಅವಿರೋಧ ಆಯ್ಕೆ ಪ್ರಕಟಿಸಿದರು.
ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 21 ಮಂದಿ ಸದಸ್ಯರಿದ್ದು, ಎಲ್ಲರೂ ಸರ್ವಾನುಮತದಿಂದ ನವೀನ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ನಾಲ್ವರು, ಬಿಜೆಪಿ ಬೆಂಬಲಿತ 12 ಮಂದಿ, ಜೆಡಿಎಸ್ ಬೆಂಬಲಿತ ಮೂವರು ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಈ ಪೈಕಿ 10 ಮಂದಿ ಮಹಿಳಾ ಸದಸ್ಯರೇ ಇದ್ದಾರೆ.
ನೂತನ ಅಧ್ಯಕ್ಷ ವೈ.ಎನ್.ನವೀನ್ ಕುಮಾರ್ ಮಾತನಾಡಿ, ಎಲ್ಲ ಸದಸ್ಯರು ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಎಲ್ಲರ ಆಶಯದಂತೆ ಹಾಗೂ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವೆಂಕಟಸ್ವಾಮಿ, ಬಿಜೆಪಿ ಮುಖಂಡ ಅರವಿಂದ, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು, ಶೆಟ್ಟಿಗೆರೆ ರಾಜಣ್ಣ, ಶಾಂತಕುಮಾರ್, ಚಂದ್ರಣ್ಣ, ಸತ್ಯನಾರಾಯಣಪ್ಪ, ವೆಂಕಟೇಗೌಡ, ವೆಂಕಟೇಶ್, ಮುನಿಕೃಷ್ಣಪ್ಪ, ಕೃಷ್ಣಪ್ಪ, ನಾಗಮ್ಮ ಇತರರು ನೂತನ ಅಧ್ಯಕ್ಷ ನವೀನ್ ಕುಮಾರ್ ಅವರನ್ನು ಅಭಿನಂದಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…