ತಾಲೂಕಿನ ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೇವಲ ನವೀನ್ ಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ನಿಗದಿತ ಅವಧಿಯೊಳಗೆ ಉಳಿದ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ನವೀನ್ ಕುಮಾರ್ ಅವರ ಆಯ್ಕೆಯನ್ನು ರೇಷ್ಮೆ ಸಹಾಯಕ ನಿರ್ದೇಶಕರು ಹಾಗೂ ಚುನಾವಣಾಧಿಕಾರಿ ಎನ್.ಗಿರಿಜಾಂಬ ಅವರು, ಅವಿರೋಧ ಆಯ್ಕೆ ಪ್ರಕಟಿಸಿದರು.
ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 21 ಮಂದಿ ಸದಸ್ಯರಿದ್ದು, ಎಲ್ಲರೂ ಸರ್ವಾನುಮತದಿಂದ ನವೀನ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ನಾಲ್ವರು, ಬಿಜೆಪಿ ಬೆಂಬಲಿತ 12 ಮಂದಿ, ಜೆಡಿಎಸ್ ಬೆಂಬಲಿತ ಮೂವರು ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಈ ಪೈಕಿ 10 ಮಂದಿ ಮಹಿಳಾ ಸದಸ್ಯರೇ ಇದ್ದಾರೆ.
ನೂತನ ಅಧ್ಯಕ್ಷ ವೈ.ಎನ್.ನವೀನ್ ಕುಮಾರ್ ಮಾತನಾಡಿ, ಎಲ್ಲ ಸದಸ್ಯರು ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಎಲ್ಲರ ಆಶಯದಂತೆ ಹಾಗೂ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವೆಂಕಟಸ್ವಾಮಿ, ಬಿಜೆಪಿ ಮುಖಂಡ ಅರವಿಂದ, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು, ಶೆಟ್ಟಿಗೆರೆ ರಾಜಣ್ಣ, ಶಾಂತಕುಮಾರ್, ಚಂದ್ರಣ್ಣ, ಸತ್ಯನಾರಾಯಣಪ್ಪ, ವೆಂಕಟೇಗೌಡ, ವೆಂಕಟೇಶ್, ಮುನಿಕೃಷ್ಣಪ್ಪ, ಕೃಷ್ಣಪ್ಪ, ನಾಗಮ್ಮ ಇತರರು ನೂತನ ಅಧ್ಯಕ್ಷ ನವೀನ್ ಕುಮಾರ್ ಅವರನ್ನು ಅಭಿನಂದಿಸಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…