ತಾಲೂಕಿನ ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೇವಲ ನವೀನ್ ಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ನಿಗದಿತ ಅವಧಿಯೊಳಗೆ ಉಳಿದ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ನವೀನ್ ಕುಮಾರ್ ಅವರ ಆಯ್ಕೆಯನ್ನು ರೇಷ್ಮೆ ಸಹಾಯಕ ನಿರ್ದೇಶಕರು ಹಾಗೂ ಚುನಾವಣಾಧಿಕಾರಿ ಎನ್.ಗಿರಿಜಾಂಬ ಅವರು, ಅವಿರೋಧ ಆಯ್ಕೆ ಪ್ರಕಟಿಸಿದರು.
ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 21 ಮಂದಿ ಸದಸ್ಯರಿದ್ದು, ಎಲ್ಲರೂ ಸರ್ವಾನುಮತದಿಂದ ನವೀನ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ನಾಲ್ವರು, ಬಿಜೆಪಿ ಬೆಂಬಲಿತ 12 ಮಂದಿ, ಜೆಡಿಎಸ್ ಬೆಂಬಲಿತ ಮೂವರು ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಈ ಪೈಕಿ 10 ಮಂದಿ ಮಹಿಳಾ ಸದಸ್ಯರೇ ಇದ್ದಾರೆ.
ನೂತನ ಅಧ್ಯಕ್ಷ ವೈ.ಎನ್.ನವೀನ್ ಕುಮಾರ್ ಮಾತನಾಡಿ, ಎಲ್ಲ ಸದಸ್ಯರು ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಎಲ್ಲರ ಆಶಯದಂತೆ ಹಾಗೂ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವೆಂಕಟಸ್ವಾಮಿ, ಬಿಜೆಪಿ ಮುಖಂಡ ಅರವಿಂದ, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು, ಶೆಟ್ಟಿಗೆರೆ ರಾಜಣ್ಣ, ಶಾಂತಕುಮಾರ್, ಚಂದ್ರಣ್ಣ, ಸತ್ಯನಾರಾಯಣಪ್ಪ, ವೆಂಕಟೇಗೌಡ, ವೆಂಕಟೇಶ್, ಮುನಿಕೃಷ್ಣಪ್ಪ, ಕೃಷ್ಣಪ್ಪ, ನಾಗಮ್ಮ ಇತರರು ನೂತನ ಅಧ್ಯಕ್ಷ ನವೀನ್ ಕುಮಾರ್ ಅವರನ್ನು ಅಭಿನಂದಿಸಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…