ತಾಲೂಕಿನ ತೂಬಗೆರೆ ಶಾಲೆಯಲ್ಲಿ ಕಲಿಕಾ ಹಬ್ಬ ಸಂಭ್ರಮ

ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಗ್ರಾಮ ಪಂಚಾಯಿತಿಯಿಂದ ಸರ್ಕಾರಿ ಶಾಲೆವರೆಗಿನ ರಸ್ತೆ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಈ ಎಲ್ಲಾ ಸಂಭ್ರಮಕ್ಕೆ ಕಾರಣ ತೂಬಗೆರೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಲಿಕಾ ಹಬ್ಬ.

ಗ್ರಾಮ ಪಂಚಾಯಿತಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಬಾರಿಸುತ್ತಿದ್ದ ಬ್ಯಾಂಡಿನ ಲಯಬದ್ಧ ಸ್ವರಕ್ಕೆ, ಗ್ರಾಮದ ಮುಖಂಡರು, ಪಾಲಕರು ಚಪ್ಪಾಳೆ ತಟ್ಟುತ್ತಾ ಹೆಜ್ಜೆ ಹಾಕಿದರು.

ಮೆರವಣಿಗೆ, ಶಾಲಾ ಮಕ್ಕಳ ವಿವಿಧ ನೃತ್ಯ, ಹುಲಿವೇಷ, ಕರಡಿವೇಷ, ಭಾವಚಿತ್ರಗಳ ಪ್ರದರ್ಶನ, ಸರ್ಕಾರದ ಯೋಜನೆಗಳ ಬಿತ್ತಿ ಪತ್ರ ಪ್ರದರ್ಶನದ ಮೂಲಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ವೇದಿಕೆ ತಲುಪಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್, ಗ್ರಾಮೀಣ ಸೊಗಡಿನ ಕಲಿಕಾ ಹಬ್ಬವು ಪ್ರತಿ ಮಕ್ಕಳ ಪ್ರತಿಭೆಯನ್ನು ಹೊರತರಲು ವೇದಿಕೆಯಾಗಿದೆ ಎಂದರು.

ಸಮೂಹ ಸಂಪನ್ಮೂಲ ವ್ಯಕ್ತಿ ಗಂಗಾಧರ್ ಮಾತನಾಡಿ ವಿದ್ಯಾರ್ಥಿಗಳು, ಪಾಲಕರು, ಸರ್ಕಾರಿ ಶಾಲೆಗಳತ್ತ ಬರುವಂತೆ ಮಾಡಲು ನಮ್ಮ ಕ್ಲಸ್ಟರ್ ವ್ಯಾಪ್ತಿಯ ಹದಿನೈದು ಶಾಲೆಗಳ 120 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಕಲಿಕಾ ಹಬ್ಬ ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಕಲಿಕಾ ಹಬ್ಬದ ಮೂಲಕ ಭಾವೈಕ್ಯತೆ, ನಾಯಕತ್ವ ಗುಣ, ಪರಿಸರ ಜ್ಞಾನ ಹೆಚ್ಚಿಸುವುದರೊಂದಿಗೆ, ಪರಿಸರದ ಬಗ್ಗೆ ಕಾಳಜಿ ವಹಿಸಲು ಪ್ರೇರೇಪಿಸುವುದಾಗಿದೆ. ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಜೊತೆಗೆ 21ನೇ ಶತಮಾನದ ಕೌಶಲ್ಯಗಳನ್ನು ಸಂತೋಷದಾಯಕ ಕಲಿಕೆಯ ಮೂಲಕ ಕಲಿಸುವುದು ಈ ಕಲಿಕಾ ಹಬ್ಬದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮದ ನಂತರ ಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೇವಲ ಪಠ್ಯಗಳಲ್ಲಿ ಮುಳುಗುತ್ತಿದ್ದ ವಿದ್ಯಾರ್ಥಿಗಳು ಕಲಿಕಾ ಹಬ್ಬದಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಕುಣಿದ ಕುಪ್ಪಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯರಾದ ಎಸ್ ಆರ್ ಮುನಿರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಾಧರ್, ನಾಗೇಶ್, ಚೆಲುವ, ವೆಂಕಟಪ್ಪ ರವಿಸಿದ್ದಪ್ಪ, ಕೃಷ್ಣಪ್ಪ, ನರಸಿಂಹಮೂರ್ತಿ, ಮುಖ್ಯ ಶಿಕ್ಷಕರಾದ ನಾಗರಾಜು, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವಸಂತಗೌಡ ಎಸ್ ನೋಡಲ್ ಅಧಿಕಾರಿ ಗಿರೀಶ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಟಿ ವಿ, ಸುರೇಶ್ ಮುಖಂಡರಾದ ಕನಕದಾಸ ಲಿಂಗಣ್ಣ, ಯುವ ಮುಖಂಡರಾದ ಉದಯ ಆರಾಧ್ಯ ಮತ್ತು ತೂಬಗೆರೆ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು ಇತರರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

13 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago