ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಊರು ಜಾತ್ರೆ ಪ್ರಯುಕ್ತ ಜು.8ರಿಂದ 10ರವರೆಗೆ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ ಸೇರಿದಂತೆ 9 ದೇವರಿಗೆ ವಿಶೇಷ ಅಲಂಕಾರ, ಪೂಜೆ ಪುನಸ್ಕಾರ, ಆರತಿ ಬೆಳಗಿ ಭಕ್ತಿಯಲ್ಲಿ ಮಿಂದೆದ್ದ ಗ್ರಾಮಸ್ಥರು.
ತಲೆಯ ಮೇಲೆ ಹೂಗಳಿಂದ ಅಲಂಕರಿಸಿದ ದೀಪಗಳನ್ನು ಹೊತ್ತುಕೊಂಡು ಮಹಿಳೆಯರು ಮಂಗಳ ವಾದ್ಯಗಳೊಂದಿಗೆ ಊರ ಪ್ರಮುಖ ದೇವರುಗಳು ಮತ್ತು ಶಕ್ತಿದೇವರುಗಳಾದ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ, ಗಣೇಶ, ಆಂಜನೇಯ ಸ್ವಾಮಿ, ಶ್ರೀರಾಮ ದೇವರು, ತಿರುಮಲ, ಗಾಳಮ್ಮ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ದೇವರುಗಳಿಗೆ ಪೂಜೆ ಸಲ್ಲಿಸುವುದರಿಂದ ಊರಿನಲ್ಲಿರುವ ಕೆಟ್ಟದ್ದು ತೊಲಗಿ ಒಳ್ಳೆಯದಾಗುತ್ತದೆ. ಮಳೆ ಬೆಳೆ ಚೆನ್ನಾಗಿ ನಡೆದು ಊರು ಪ್ರಗತಿ ಸಾಧಿಸುತ್ತದೆ ಎಂಬ ನಂಬಿಕೆಯಿದೆ. ಮಹಿಳೆಯರನ್ನು ತವರಿಗೆ ಕರೆಸಿಕೊಂಡು ಅರಿಶಿನ, ಕುಂಕುಮ ಕೊಡುವುದು ವಾಡಿಕೆ ಈ ಗ್ರಾಮದಲ್ಲಿದೆ.
ಸತತ 9 ವರ್ಷಗಳ ನಂತರ ಗ್ರಾಮದಲ್ಲಿ ಜಾತ್ರಾ ಮಹೋತ್ಸವನ್ನು ಅದ್ಧೂರಿ, ಸಂಭ್ರಮ, ಸಡಗರದಿಂದ ನಡೆಸಲಾಯಿತು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಭಕ್ತಿಯಲ್ಲಿ ಗ್ರಾಮಸ್ಥರೆಲ್ಲಾ ಮಿಂದೆದ್ದರು. ಜಾತ್ರಾ ಸಂಭ್ರಮವನ್ನು ಕಣ್ತುಂಬಿಕೊಳ್ಳು ಅಕ್ಕಪಕ್ಕದ ಊರಿನವರು ಆಗಮಿಸಿ ಸಂಭ್ರಮಿಸಿದರು.
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…