ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಊರು ಜಾತ್ರೆ ಪ್ರಯುಕ್ತ ಜು.8ರಿಂದ 10ರವರೆಗೆ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ ಸೇರಿದಂತೆ 9 ದೇವರಿಗೆ ವಿಶೇಷ ಅಲಂಕಾರ, ಪೂಜೆ ಪುನಸ್ಕಾರ, ಆರತಿ ಬೆಳಗಿ ಭಕ್ತಿಯಲ್ಲಿ ಮಿಂದೆದ್ದ ಗ್ರಾಮಸ್ಥರು.
ತಲೆಯ ಮೇಲೆ ಹೂಗಳಿಂದ ಅಲಂಕರಿಸಿದ ದೀಪಗಳನ್ನು ಹೊತ್ತುಕೊಂಡು ಮಹಿಳೆಯರು ಮಂಗಳ ವಾದ್ಯಗಳೊಂದಿಗೆ ಊರ ಪ್ರಮುಖ ದೇವರುಗಳು ಮತ್ತು ಶಕ್ತಿದೇವರುಗಳಾದ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ, ಗಣೇಶ, ಆಂಜನೇಯ ಸ್ವಾಮಿ, ಶ್ರೀರಾಮ ದೇವರು, ತಿರುಮಲ, ಗಾಳಮ್ಮ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ದೇವರುಗಳಿಗೆ ಪೂಜೆ ಸಲ್ಲಿಸುವುದರಿಂದ ಊರಿನಲ್ಲಿರುವ ಕೆಟ್ಟದ್ದು ತೊಲಗಿ ಒಳ್ಳೆಯದಾಗುತ್ತದೆ. ಮಳೆ ಬೆಳೆ ಚೆನ್ನಾಗಿ ನಡೆದು ಊರು ಪ್ರಗತಿ ಸಾಧಿಸುತ್ತದೆ ಎಂಬ ನಂಬಿಕೆಯಿದೆ. ಮಹಿಳೆಯರನ್ನು ತವರಿಗೆ ಕರೆಸಿಕೊಂಡು ಅರಿಶಿನ, ಕುಂಕುಮ ಕೊಡುವುದು ವಾಡಿಕೆ ಈ ಗ್ರಾಮದಲ್ಲಿದೆ.
ಸತತ 9 ವರ್ಷಗಳ ನಂತರ ಗ್ರಾಮದಲ್ಲಿ ಜಾತ್ರಾ ಮಹೋತ್ಸವನ್ನು ಅದ್ಧೂರಿ, ಸಂಭ್ರಮ, ಸಡಗರದಿಂದ ನಡೆಸಲಾಯಿತು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಭಕ್ತಿಯಲ್ಲಿ ಗ್ರಾಮಸ್ಥರೆಲ್ಲಾ ಮಿಂದೆದ್ದರು. ಜಾತ್ರಾ ಸಂಭ್ರಮವನ್ನು ಕಣ್ತುಂಬಿಕೊಳ್ಳು ಅಕ್ಕಪಕ್ಕದ ಊರಿನವರು ಆಗಮಿಸಿ ಸಂಭ್ರಮಿಸಿದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…