ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಊರು ಜಾತ್ರೆ ಪ್ರಯುಕ್ತ ಜು.8ರಿಂದ 10ರವರೆಗೆ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ ಸೇರಿದಂತೆ 9 ದೇವರಿಗೆ ವಿಶೇಷ ಅಲಂಕಾರ, ಪೂಜೆ ಪುನಸ್ಕಾರ, ಆರತಿ ಬೆಳಗಿ ಭಕ್ತಿಯಲ್ಲಿ ಮಿಂದೆದ್ದ ಗ್ರಾಮಸ್ಥರು.
ತಲೆಯ ಮೇಲೆ ಹೂಗಳಿಂದ ಅಲಂಕರಿಸಿದ ದೀಪಗಳನ್ನು ಹೊತ್ತುಕೊಂಡು ಮಹಿಳೆಯರು ಮಂಗಳ ವಾದ್ಯಗಳೊಂದಿಗೆ ಊರ ಪ್ರಮುಖ ದೇವರುಗಳು ಮತ್ತು ಶಕ್ತಿದೇವರುಗಳಾದ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ, ಗಣೇಶ, ಆಂಜನೇಯ ಸ್ವಾಮಿ, ಶ್ರೀರಾಮ ದೇವರು, ತಿರುಮಲ, ಗಾಳಮ್ಮ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ದೇವರುಗಳಿಗೆ ಪೂಜೆ ಸಲ್ಲಿಸುವುದರಿಂದ ಊರಿನಲ್ಲಿರುವ ಕೆಟ್ಟದ್ದು ತೊಲಗಿ ಒಳ್ಳೆಯದಾಗುತ್ತದೆ. ಮಳೆ ಬೆಳೆ ಚೆನ್ನಾಗಿ ನಡೆದು ಊರು ಪ್ರಗತಿ ಸಾಧಿಸುತ್ತದೆ ಎಂಬ ನಂಬಿಕೆಯಿದೆ. ಮಹಿಳೆಯರನ್ನು ತವರಿಗೆ ಕರೆಸಿಕೊಂಡು ಅರಿಶಿನ, ಕುಂಕುಮ ಕೊಡುವುದು ವಾಡಿಕೆ ಈ ಗ್ರಾಮದಲ್ಲಿದೆ.
ಸತತ 9 ವರ್ಷಗಳ ನಂತರ ಗ್ರಾಮದಲ್ಲಿ ಜಾತ್ರಾ ಮಹೋತ್ಸವನ್ನು ಅದ್ಧೂರಿ, ಸಂಭ್ರಮ, ಸಡಗರದಿಂದ ನಡೆಸಲಾಯಿತು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಭಕ್ತಿಯಲ್ಲಿ ಗ್ರಾಮಸ್ಥರೆಲ್ಲಾ ಮಿಂದೆದ್ದರು. ಜಾತ್ರಾ ಸಂಭ್ರಮವನ್ನು ಕಣ್ತುಂಬಿಕೊಳ್ಳು ಅಕ್ಕಪಕ್ಕದ ಊರಿನವರು ಆಗಮಿಸಿ ಸಂಭ್ರಮಿಸಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…