ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಊರು ಜಾತ್ರೆ ಪ್ರಯುಕ್ತ ಜು.8ರಿಂದ 10ರವರೆಗೆ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ ಸೇರಿದಂತೆ 9 ದೇವರಿಗೆ ವಿಶೇಷ ಅಲಂಕಾರ, ಪೂಜೆ ಪುನಸ್ಕಾರ, ಆರತಿ ಬೆಳಗಿ ಭಕ್ತಿಯಲ್ಲಿ ಮಿಂದೆದ್ದ ಗ್ರಾಮಸ್ಥರು.
ತಲೆಯ ಮೇಲೆ ಹೂಗಳಿಂದ ಅಲಂಕರಿಸಿದ ದೀಪಗಳನ್ನು ಹೊತ್ತುಕೊಂಡು ಮಹಿಳೆಯರು ಮಂಗಳ ವಾದ್ಯಗಳೊಂದಿಗೆ ಊರ ಪ್ರಮುಖ ದೇವರುಗಳು ಮತ್ತು ಶಕ್ತಿದೇವರುಗಳಾದ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ, ಗಣೇಶ, ಆಂಜನೇಯ ಸ್ವಾಮಿ, ಶ್ರೀರಾಮ ದೇವರು, ತಿರುಮಲ, ಗಾಳಮ್ಮ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ದೇವರುಗಳಿಗೆ ಪೂಜೆ ಸಲ್ಲಿಸುವುದರಿಂದ ಊರಿನಲ್ಲಿರುವ ಕೆಟ್ಟದ್ದು ತೊಲಗಿ ಒಳ್ಳೆಯದಾಗುತ್ತದೆ. ಮಳೆ ಬೆಳೆ ಚೆನ್ನಾಗಿ ನಡೆದು ಊರು ಪ್ರಗತಿ ಸಾಧಿಸುತ್ತದೆ ಎಂಬ ನಂಬಿಕೆಯಿದೆ. ಮಹಿಳೆಯರನ್ನು ತವರಿಗೆ ಕರೆಸಿಕೊಂಡು ಅರಿಶಿನ, ಕುಂಕುಮ ಕೊಡುವುದು ವಾಡಿಕೆ ಈ ಗ್ರಾಮದಲ್ಲಿದೆ.
ಸತತ 9 ವರ್ಷಗಳ ನಂತರ ಗ್ರಾಮದಲ್ಲಿ ಜಾತ್ರಾ ಮಹೋತ್ಸವನ್ನು ಅದ್ಧೂರಿ, ಸಂಭ್ರಮ, ಸಡಗರದಿಂದ ನಡೆಸಲಾಯಿತು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಭಕ್ತಿಯಲ್ಲಿ ಗ್ರಾಮಸ್ಥರೆಲ್ಲಾ ಮಿಂದೆದ್ದರು. ಜಾತ್ರಾ ಸಂಭ್ರಮವನ್ನು ಕಣ್ತುಂಬಿಕೊಳ್ಳು ಅಕ್ಕಪಕ್ಕದ ಊರಿನವರು ಆಗಮಿಸಿ ಸಂಭ್ರಮಿಸಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…