ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಊರು ಜಾತ್ರೆ ಪ್ರಯುಕ್ತ ಜು.8ರಿಂದ 10ರವರೆಗೆ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ ಸೇರಿದಂತೆ 9 ದೇವರಿಗೆ ವಿಶೇಷ ಅಲಂಕಾರ, ಪೂಜೆ ಪುನಸ್ಕಾರ, ಆರತಿ ಬೆಳಗಿ ಭಕ್ತಿಯಲ್ಲಿ ಮಿಂದೆದ್ದ ಗ್ರಾಮಸ್ಥರು.
ತಲೆಯ ಮೇಲೆ ಹೂಗಳಿಂದ ಅಲಂಕರಿಸಿದ ದೀಪಗಳನ್ನು ಹೊತ್ತುಕೊಂಡು ಮಹಿಳೆಯರು ಮಂಗಳ ವಾದ್ಯಗಳೊಂದಿಗೆ ಊರ ಪ್ರಮುಖ ದೇವರುಗಳು ಮತ್ತು ಶಕ್ತಿದೇವರುಗಳಾದ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ, ಗಣೇಶ, ಆಂಜನೇಯ ಸ್ವಾಮಿ, ಶ್ರೀರಾಮ ದೇವರು, ತಿರುಮಲ, ಗಾಳಮ್ಮ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ದೇವರುಗಳಿಗೆ ಪೂಜೆ ಸಲ್ಲಿಸುವುದರಿಂದ ಊರಿನಲ್ಲಿರುವ ಕೆಟ್ಟದ್ದು ತೊಲಗಿ ಒಳ್ಳೆಯದಾಗುತ್ತದೆ. ಮಳೆ ಬೆಳೆ ಚೆನ್ನಾಗಿ ನಡೆದು ಊರು ಪ್ರಗತಿ ಸಾಧಿಸುತ್ತದೆ ಎಂಬ ನಂಬಿಕೆಯಿದೆ. ಮಹಿಳೆಯರನ್ನು ತವರಿಗೆ ಕರೆಸಿಕೊಂಡು ಅರಿಶಿನ, ಕುಂಕುಮ ಕೊಡುವುದು ವಾಡಿಕೆ ಈ ಗ್ರಾಮದಲ್ಲಿದೆ.
ಸತತ 9 ವರ್ಷಗಳ ನಂತರ ಗ್ರಾಮದಲ್ಲಿ ಜಾತ್ರಾ ಮಹೋತ್ಸವನ್ನು ಅದ್ಧೂರಿ, ಸಂಭ್ರಮ, ಸಡಗರದಿಂದ ನಡೆಸಲಾಯಿತು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಭಕ್ತಿಯಲ್ಲಿ ಗ್ರಾಮಸ್ಥರೆಲ್ಲಾ ಮಿಂದೆದ್ದರು. ಜಾತ್ರಾ ಸಂಭ್ರಮವನ್ನು ಕಣ್ತುಂಬಿಕೊಳ್ಳು ಅಕ್ಕಪಕ್ಕದ ಊರಿನವರು ಆಗಮಿಸಿ ಸಂಭ್ರಮಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…