ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ‌ ಸುಬ್ರಹ್ಮಣ್ಯ ದೇವಾಲಯದ ಹುಂಡಿ ಕಾಣಿಕೆ ಎಣಿಕೆ; 85,23,744ರೂ. ಸಂಗ್ರಹ

ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 85,23,744 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೋಮವಾರ ನಡೆದ‌ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌ ಮಾಡಲಾಯಿತು.

ಘಾಟಿ‌ ಸುಬ್ರಹ್ಮಣ್ಯ ಸ್ವಾಮಿ‌ ಬ್ರಹ್ಮರಥೋತ್ಸವ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ‌ ಅಪಾರ ಭಕ್ತರು ಆಗಮಿಸಿದ್ದರು. ಕಳೆದ ವರ್ಷ ನ.14ರಂದು ಹುಂಡಿ‌ ಎಣಿಕೆ ಮಾಡಲಾಗಿತ್ತು.

ಸೋಮವಾರ ನಡೆದ ಹುಂಡಿ‌ ಎಣಿಕೆ‌ ಕಾರ್ಯದಲ್ಲಿ 85.23 ಲಕ್ಷ ನಗದು, 11.900 ಗ್ರಾಂ ಚಿನ್ನ, 5ಕೆ.ಜಿ.50 ಗ್ರಾಂ ಬೆಳ್ಳಿ ಸಂಗ್ರಹ ಆಗಿದೆ.

ಹುಂಡಿ ಎಣಿಕೆ‌ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ‌ ಅಧಿಕಾರಿ ಡಿ.ನಾಗರಾಜು, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ‌ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ಎಸ್.ಎನ್.ಸುಬ್ಬಕೃಷ್ಣಶಾಸ್ತ್ರಿ, ದೇವಾಲಯದ ನಂಜಪ್ಪ, ಇಂಡಿಯನ್‌ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ‌ ಸಿಬ್ಬಂದಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *