ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ.
ಕುಂಟನಕುಂಟೆ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಶುಕ್ರವಾರ ಬೆಳಿಗ್ಗೆ 7.30 ರ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ರೈತ ತಿಪ್ಪಯ್ಯ ಅವರ ತೋಟದ ಬಳಿ ಚಿರತೆ ಕಾಣಿಸಿಕೊಂಡಿದೆ. ಭಯಭೀತರಾಗಿ ಕಿರುಚಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.
ಬಚ್ಚಹಳ್ಳಿ ಗ್ರಾಮದಲ್ಲಿ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಹಗಲಲ್ಲಿ ಒಬ್ಬೊಬ್ಬರೇ ಹೊಲ,ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.
ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಸುತ್ತಲಿನ ಜನರಿಗೆ ಬೆಳಿಗ್ಗೆ 6 ರಿಂದ 7 ಗಂಟೆಯೊಳಗೆ ಕಾಣಿಸಿಕೊಳ್ಳುತ್ತಿದೆ.
ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿದು ಜನರನ್ನು ಜೀವ ಭಯದಿಂದ ಮುಕ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…