ತಾಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ

ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ.

ಕುಂಟನಕುಂಟೆ‌ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಶುಕ್ರವಾರ ಬೆಳಿಗ್ಗೆ 7.30 ರ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ರೈತ ತಿಪ್ಪಯ್ಯ ಅವರ ತೋಟದ ಬಳಿ ಚಿರತೆ ಕಾಣಿಸಿಕೊಂಡಿದೆ. ಭಯಭೀತರಾಗಿ ಕಿರುಚಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.

ಬಚ್ಚಹಳ್ಳಿ ಗ್ರಾಮದಲ್ಲಿ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಹಗಲಲ್ಲಿ ಒಬ್ಬೊಬ್ಬರೇ ಹೊಲ,ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.

ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಸುತ್ತಲಿನ ಜನರಿಗೆ ಬೆಳಿಗ್ಗೆ 6 ರಿಂದ 7 ಗಂಟೆಯೊಳಗೆ ಕಾಣಿಸಿಕೊಳ್ಳುತ್ತಿದೆ.

ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು, ಬಚ್ಚಹಳ್ಳಿಯ ಹಳ್ಳದ ಬಳಿ ಜ.26 ರಂದೇ ಬೋನು ಇರಿಸಿದ್ದಾರೆ. ಆದರೆ ಖತರ್ನಾಕ್ ಚಿರತೆ ಈವರೆಗೂ ಬೋನಿಗೆ ಬಿದ್ದಿಲ್ಲ. ಶುಕ್ರವಾರ‌ ಅಂತರಹಳ್ಳಿ ಬಳಿ ಚಿರತೆ ಕಂಡು ಬಂದ ಬಗ್ಗೆ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹೆಜ್ಜೆ ಗುರುತು ಪರಿಶೀಲಿಸಿ ಖಚಿತಪಡಿಸಿದರು.

ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿದು ಜನರನ್ನು ಜೀವ ಭಯದಿಂದ ಮುಕ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

2 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

2 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

5 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

5 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

15 hours ago