ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ.
ಕುಂಟನಕುಂಟೆ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಶುಕ್ರವಾರ ಬೆಳಿಗ್ಗೆ 7.30 ರ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ರೈತ ತಿಪ್ಪಯ್ಯ ಅವರ ತೋಟದ ಬಳಿ ಚಿರತೆ ಕಾಣಿಸಿಕೊಂಡಿದೆ. ಭಯಭೀತರಾಗಿ ಕಿರುಚಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.
ಬಚ್ಚಹಳ್ಳಿ ಗ್ರಾಮದಲ್ಲಿ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಹಗಲಲ್ಲಿ ಒಬ್ಬೊಬ್ಬರೇ ಹೊಲ,ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.
ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಸುತ್ತಲಿನ ಜನರಿಗೆ ಬೆಳಿಗ್ಗೆ 6 ರಿಂದ 7 ಗಂಟೆಯೊಳಗೆ ಕಾಣಿಸಿಕೊಳ್ಳುತ್ತಿದೆ.
ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿದು ಜನರನ್ನು ಜೀವ ಭಯದಿಂದ ಮುಕ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…