ತಾಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ

ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ.

ಕುಂಟನಕುಂಟೆ‌ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಶುಕ್ರವಾರ ಬೆಳಿಗ್ಗೆ 7.30 ರ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ರೈತ ತಿಪ್ಪಯ್ಯ ಅವರ ತೋಟದ ಬಳಿ ಚಿರತೆ ಕಾಣಿಸಿಕೊಂಡಿದೆ. ಭಯಭೀತರಾಗಿ ಕಿರುಚಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.

ಬಚ್ಚಹಳ್ಳಿ ಗ್ರಾಮದಲ್ಲಿ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಹಗಲಲ್ಲಿ ಒಬ್ಬೊಬ್ಬರೇ ಹೊಲ,ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.

ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಸುತ್ತಲಿನ ಜನರಿಗೆ ಬೆಳಿಗ್ಗೆ 6 ರಿಂದ 7 ಗಂಟೆಯೊಳಗೆ ಕಾಣಿಸಿಕೊಳ್ಳುತ್ತಿದೆ.

ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು, ಬಚ್ಚಹಳ್ಳಿಯ ಹಳ್ಳದ ಬಳಿ ಜ.26 ರಂದೇ ಬೋನು ಇರಿಸಿದ್ದಾರೆ. ಆದರೆ ಖತರ್ನಾಕ್ ಚಿರತೆ ಈವರೆಗೂ ಬೋನಿಗೆ ಬಿದ್ದಿಲ್ಲ. ಶುಕ್ರವಾರ‌ ಅಂತರಹಳ್ಳಿ ಬಳಿ ಚಿರತೆ ಕಂಡು ಬಂದ ಬಗ್ಗೆ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹೆಜ್ಜೆ ಗುರುತು ಪರಿಶೀಲಿಸಿ ಖಚಿತಪಡಿಸಿದರು.

ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿದು ಜನರನ್ನು ಜೀವ ಭಯದಿಂದ ಮುಕ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

57 minutes ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

11 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

22 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

23 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

23 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago