ತಾಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ

ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ.

ಕುಂಟನಕುಂಟೆ‌ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಶುಕ್ರವಾರ ಬೆಳಿಗ್ಗೆ 7.30 ರ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ರೈತ ತಿಪ್ಪಯ್ಯ ಅವರ ತೋಟದ ಬಳಿ ಚಿರತೆ ಕಾಣಿಸಿಕೊಂಡಿದೆ. ಭಯಭೀತರಾಗಿ ಕಿರುಚಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.

ಬಚ್ಚಹಳ್ಳಿ ಗ್ರಾಮದಲ್ಲಿ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಹಗಲಲ್ಲಿ ಒಬ್ಬೊಬ್ಬರೇ ಹೊಲ,ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.

ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಸುತ್ತಲಿನ ಜನರಿಗೆ ಬೆಳಿಗ್ಗೆ 6 ರಿಂದ 7 ಗಂಟೆಯೊಳಗೆ ಕಾಣಿಸಿಕೊಳ್ಳುತ್ತಿದೆ.

ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು, ಬಚ್ಚಹಳ್ಳಿಯ ಹಳ್ಳದ ಬಳಿ ಜ.26 ರಂದೇ ಬೋನು ಇರಿಸಿದ್ದಾರೆ. ಆದರೆ ಖತರ್ನಾಕ್ ಚಿರತೆ ಈವರೆಗೂ ಬೋನಿಗೆ ಬಿದ್ದಿಲ್ಲ. ಶುಕ್ರವಾರ‌ ಅಂತರಹಳ್ಳಿ ಬಳಿ ಚಿರತೆ ಕಂಡು ಬಂದ ಬಗ್ಗೆ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹೆಜ್ಜೆ ಗುರುತು ಪರಿಶೀಲಿಸಿ ಖಚಿತಪಡಿಸಿದರು.

ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿದು ಜನರನ್ನು ಜೀವ ಭಯದಿಂದ ಮುಕ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

4 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

7 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

21 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago