ತಾಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ

ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ.

ಕುಂಟನಕುಂಟೆ‌ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಶುಕ್ರವಾರ ಬೆಳಿಗ್ಗೆ 7.30 ರ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ರೈತ ತಿಪ್ಪಯ್ಯ ಅವರ ತೋಟದ ಬಳಿ ಚಿರತೆ ಕಾಣಿಸಿಕೊಂಡಿದೆ. ಭಯಭೀತರಾಗಿ ಕಿರುಚಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.

ಬಚ್ಚಹಳ್ಳಿ ಗ್ರಾಮದಲ್ಲಿ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಹಗಲಲ್ಲಿ ಒಬ್ಬೊಬ್ಬರೇ ಹೊಲ,ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.

ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಸುತ್ತಲಿನ ಜನರಿಗೆ ಬೆಳಿಗ್ಗೆ 6 ರಿಂದ 7 ಗಂಟೆಯೊಳಗೆ ಕಾಣಿಸಿಕೊಳ್ಳುತ್ತಿದೆ.

ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು, ಬಚ್ಚಹಳ್ಳಿಯ ಹಳ್ಳದ ಬಳಿ ಜ.26 ರಂದೇ ಬೋನು ಇರಿಸಿದ್ದಾರೆ. ಆದರೆ ಖತರ್ನಾಕ್ ಚಿರತೆ ಈವರೆಗೂ ಬೋನಿಗೆ ಬಿದ್ದಿಲ್ಲ. ಶುಕ್ರವಾರ‌ ಅಂತರಹಳ್ಳಿ ಬಳಿ ಚಿರತೆ ಕಂಡು ಬಂದ ಬಗ್ಗೆ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹೆಜ್ಜೆ ಗುರುತು ಪರಿಶೀಲಿಸಿ ಖಚಿತಪಡಿಸಿದರು.

ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿದು ಜನರನ್ನು ಜೀವ ಭಯದಿಂದ ಮುಕ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

53 minutes ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

22 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago