ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ.
ಕುಂಟನಕುಂಟೆ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ ಪದೇ ಒಂಟಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಶುಕ್ರವಾರ ಬೆಳಿಗ್ಗೆ 7.30 ರ ಸಮಯದಲ್ಲಿ ಅಂತರಹಳ್ಳಿ ಗ್ರಾಮದ ರೈತ ತಿಪ್ಪಯ್ಯ ಅವರ ತೋಟದ ಬಳಿ ಚಿರತೆ ಕಾಣಿಸಿಕೊಂಡಿದೆ. ಭಯಭೀತರಾಗಿ ಕಿರುಚಿಕೊಳ್ಳುತ್ತಿದ್ದಂತೆ ನೀಲಗಿರಿ ತೋಪಿನತ್ತ ಪರಾರಿಯಾಗಿದೆ.
ಬಚ್ಚಹಳ್ಳಿ ಗ್ರಾಮದಲ್ಲಿ ಕೆಲ ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರು ಬೆಚ್ಚಿ ಬಿದ್ದಿದ್ದು, ಜೀವ ಭಯದಲ್ಲಿ ಮನೆಗಳಿಂದ ಹೊರಬರುತ್ತಿಲ್ಲ. ಹಗಲಲ್ಲಿ ಒಬ್ಬೊಬ್ಬರೇ ಹೊಲ,ತೋಟದತ್ತ ತೆರಳಲು ಭಯಪಡುತ್ತಿದ್ದಾರೆ.
ಚಿರತೆಯಿಂದ ಅದೃಷ್ಟವಶಾತ್ ಇದುವರೆಗೂ ಯಾವುದೇ ಅಪಾಯವಾಗಿಲ್ಲ. ಅಪಾಯಕ್ಕೂ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮದ ಸುತ್ತಮುತ್ತ ನೀಲಿಗಿರಿ ತೋಪುಗಳಿದ್ದು, ಚಿರತೆಯ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಸುತ್ತಲಿನ ಜನರಿಗೆ ಬೆಳಿಗ್ಗೆ 6 ರಿಂದ 7 ಗಂಟೆಯೊಳಗೆ ಕಾಣಿಸಿಕೊಳ್ಳುತ್ತಿದೆ.
ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿದು ಜನರನ್ನು ಜೀವ ಭಯದಿಂದ ಮುಕ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…